ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವೀಕರಿಸಿದ ಸ್ಮರಣಿಕೆಗಳ ಹರಾಜಿನಲ್ಲಿ ಪಾಲ್ಗೊಳ್ಳಲು ನಾಗರಿಕರಿಗೆ ಪ್ರಧಾನಮಂತ್ರಿ ಉತ್ತೇಜನ

ಪ್ರಕಟಣಾ ದಿನಾಂಕ: 27 OCT 2023 1:54PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಾವು ಸ್ವೀಕರಿಸಿದ ಸ್ಮರಣಿಕೆಗಳನ್ನು ತಮ್ಮದಾಗಿಸಿಕೊಳ್ಳಲು ಹರಾಜಿನಲ್ಲಿ ಪಾಲ್ಗೊಳ್ಳುವಂತೆ ಮತ್ತು ತಮ್ಮ ಬಿಡ್ ಗಳನ್ನು ಸಲ್ಲಿಸುವಂತೆ ನಾಗರಿಕರನ್ನು ಉತ್ತೇಜಿಸಿದ್ದಾರೆ. ಇದರಿಂದ ಬರುವ ಹಣವನ್ನು ನಮಾಮಿ ಗಂಗೆಗೆ ಅರ್ಪಿಸಲಾಗಿದೆ ಎಂದು ಶ್ರೀ ನರೇಂದ್ರ ಮೋದಿ ಮಾಹಿತಿ ನೀಡಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

" ವರ್ಷಗಳಿಂದ ನನಗೆ ದೊರೆತ ಸ್ಮರಣಿಕೆಗಳ ಹರಾಜಿಗೆ ದೊರೆತ ಅಭೂತಪೂರ್ವ ಪ್ರತಿಕ್ರಿಯೆಯಿಂದ ನಾನು ನಿಜವಾಗಿಯೂ ಸಂತೋಷಗೊಂಡಿದ್ದೇನೆ. ನಿಮಗೆ ತಿಳಿದಿರುವಂತೆ, ಆದಾಯವನ್ನು ನಮಾಮಿ ಗಂಗೆಗೆ ಅರ್ಪಿಸಲಾಗಿದೆ. ನಾನು ಸ್ವೀಕರಿಸಿದ ಕೆಲವು ಸ್ಮರಣಿಕೆಗಳಿಗಾಗಿ ಪ್ರತಿಯೊಬ್ಬರೂ ಸೇರಲು ಮತ್ತು ತಮ್ಮ ಬಿಡ್ ಗಳನ್ನು ಸಲ್ಲಿಸಲು ನಾನು ಪ್ರೋತ್ಸಾಹಿಸುತ್ತೇನೆ. pmmementos.gov.in/#/  " ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1971962) ವಿಸಿಟರ್ ಕೌಂಟರ್ : 139