ಉಪರಾಷ್ಟ್ರಪತಿಗಳ ಕಾರ್ಯಾಲಯ

27 ನವೆಂಬರ್ 2023 ರಂದು ಮಹಾರಾಷ್ಟ್ರದ ಮುಂಬೈಗೆ ಭೇಟಿ ನೀಡಲಿರುವ ಉಪರಾಷ್ಟ್ರಪತಿ


ಶ್ರೀಮದ್ ರಾಜಚಂದ್ರಜೀಯವರ ಜನ್ಮ ದಿನಾಚರಣೆಯ ಅಂಗವಾಗಿ ನಡೆಯುವ ‘ಆತ್ಮಕಲ್ಯಾಣ ದಿವಸ’ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿಯವರು ಭಾಗವಹಿಸಲಿದ್ದಾರೆ

Posted On: 25 NOV 2023 9:26AM by PIB Bengaluru

ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 27 ನವೆಂಬರ್ 2023 ರಂದು ಮಹಾರಾಷ್ಟ್ರದ ಮುಂಬೈಗೆ ಭೇಟಿ ನೀಡಲಿದ್ದಾರೆ.

ರಾಜ್ಯಕ್ಕೆ ತಮ್ಮ ಒಂದು ದಿನದ ಪ್ರವಾಸದ ಸಂದರ್ಭದಲ್ಲಿ, ಶ್ರೀ ಜಗದೀಪ್ ಧನಕರ್ ಅವರು ಶ್ರೀಮದ್ ರಾಜಚಂದ್ರಜೀಯವರ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಉಪರಾಷ್ಟ್ರಪತಿಯವರು ಶ್ರೀಮದ್ ರಾಜಚಂದ್ರಜೀ ಅವರ ಭಿತ್ತಿಚಿತ್ರವನ್ನು ಅನಾವರಣಗೊಳಿಸಲಿದ್ದಾರೆ.


*****



(Release ID: 1979751) Visitor Counter : 67