ಗೃಹ ವ್ಯವಹಾರಗಳ ಸಚಿವಾಲಯ

‘ತೆಹ್ರೀಕ್-ಎ-ಹುರಿಯತ್, ಜಮ್ಮು ಮತ್ತು ಕಾಶ್ಮೀರ (TeH)’ ಅನ್ನು ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಿದ ಕೇಂದ್ರ ಸರ್ಕಾರ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಯೋತ್ಪಾದನೆಯ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳುವ ನೀತಿಯಡಿಲ್ಲಿ ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಭಾರತದಿಂದ ಜಮ್ಮು ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತಕ್ಕೆ ಒತ್ತು ನೀಡುವ ಮೂಲಕ ಸಮಾಜ ವಿದ್ರೋಹಿ ಚಟುವಟಿಕೆಗಳಲ್ಲಿ ಈ ಸಂಘಟನೆಯು ತೊಡಗಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಹೇಳಿದ್ದಾರೆ.

ಈ ಗುಂಪು ಭಾರತ-ವಿರೋಧಿ ಪ್ರಚಾರವನ್ನು ಹರಡುತ್ತಿದೆ ಮತ್ತು ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರಿಸುತ್ತಿದೆ.

Posted On: 31 DEC 2023 1:46PM by PIB Bengaluru

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) 1967 ರ ಸೆಕ್ಷನ್ 3(1) ರ ಅಡಿಯಲ್ಲಿ ಕೇಂದ್ರ ಸರ್ಕಾರವು ‘ತೆಹ್ರೀಕ್-ಎ-ಹುರಿಯತ್, ಜಮ್ಮು ಮತ್ತು ಕಾಶ್ಮೀರ (TeH)’ ಅನ್ನು ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಿದೆ.

ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಸಾಮಾಜಿಕ ಜಾಲತಾಣ  'X' ನಲ್ಲಿ ಸಂದೇಶ ನೀಡಿದ್ದಾರೆ. "ಭಾರತದಿಂದ ಜಮ್ಮು  ಅನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಈ ಸಂಘಟನೆಯು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಈ ಗುಂಪು ಭಾರತ-ವಿರೋಧಿ ಪ್ರಚಾರವನ್ನು ಹರಡುತ್ತಿದೆ ಮತ್ತು ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನೀತಿಯಡಿಯಲ್ಲಿ, ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ತಕ್ಷಣವೇ ತಡೆಯಲಾಗುವುದು ಎಂದು ಗೃಹ ಸಚಿವರು ಹೇಳಿದರು.

ತೆಹ್ರೀಕ್-ಎ-ಹುರಿಯತ್, ಜಮ್ಮು ಮತ್ತು ಕಾಶ್ಮೀರ (TeH) ಉದ್ದೇಶವು ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸುವುದು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವುದು. ಈ ಸಂಘಟನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಭಯೋತ್ಪಾದನೆ ಮತ್ತು ಭಾರತ ವಿರೋಧಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ, ಇದು ಭಾರತದ ಸಾರ್ವಭೌಮತೆ, ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡಿದೆ. ಈ ಸಂಸ್ಥೆಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ, ಆರ್‌ಪಿಸಿ ಮತ್ತು ಐಪಿಸಿ ಇತ್ಯಾದಿಗಳ ವಿವಿಧ ವಿಭಾಗಗಳ ಅಡಿಯಲ್ಲಿ ಅನೇಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.



(Release ID: 1991982) Visitor Counter : 66