ಪ್ರಧಾನ ಮಂತ್ರಿಯವರ ಕಛೇರಿ

ಜನ ಮನ ಸರ್ವೇ ಆಯ್ಕೆ ಮಾಡಿಕೊಂಡು ಭಾರತದ ಪ್ರಗತಿಯ ಬಗ್ಗೆ ನಿಮ್ಮ ಅನಿಸಿಕೆ ನನ್ನೊಂದಿಗೆ ಹಂಚಿಕೊಳ್ಳಿ: ಪ್ರಧಾನಿ 

Posted On: 01 JAN 2024 2:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ ಮನ ಸಮೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಿ ಮತ್ತು ಕಳೆದ 10 ವರ್ಷಗಳಲ್ಲಿ ಭಾರತ ಸಾಧಿಸಿರುವ ಪ್ರಗತಿಯ ಕುರಿತು ನನ್ನೊಂದಿಗೆ ನಿಮ್ಮ ಅನಿಸಿಕೆಯನ್ನು ಹಂಚಿಕೊಳ್ಳಿ ಎಂದು ಜನರಿಗೆ ಇಂದು ಕರೆ ನೀಡಿದ್ದಾರೆ.

ಪ್ರಧಾನಮಂತ್ರಿ ಅವರು ಸಾಮಾಜಿಕ ಮಾಧ್ಯಮ ಜಾಲತಾಣ X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ.

“ಕಳೆದ 10 ವರ್ಷಗಳಲ್ಲಿ ಭಾರತ ನಾನಾ ವಲಯಗಳಲ್ಲಿ ಸಾಧಿಸಿರುವ ಪ್ರಗತಿಯ ಬಗ್ಗೆ ನಿಮ್ಮ ಅನಿಸಿಕೆ ಏನು?
ನಮೋ ಆಪ್‌ ನಲ್ಲಿ ಜನ ಮನ ಸರ್ವೆ ಆಯ್ದುಕೊಂಡು ಅದರ ಮೂಲಕ ನೇರವಾಗಿ ನಿಮ್ಮ ಪ್ರತಿಕ್ರಿಯೆಯನ್ನು ಹಂಚಿಕೊಳ್ಳಿ’’..!  

***



(Release ID: 1992157) Visitor Counter : 98