ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಎಂ.ಜಿ. ರಾಮಚಂದ್ರನ್ ಅವರ ಜನ್ಮದಿನದಂದು ಅವನ್ನು ಸ್ಮರಿಸಿಕೊಂಡ ಪ್ರಧಾನ ಮಂತ್ರಿ

Posted On: 17 JAN 2024 8:26AM by PIB Bengaluru

ತಮಿಳು ಚಿತ್ರರಂಗದ ಖ್ಯಾತ ವ್ಯಕ್ತಿ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಶ್ರೀ ಎಂ.ಜಿ. ರಾಮಚಂದ್ರನ್ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿಳಿಸಿದ್ದಾರೆ;

“ಇಂದು, ಮಹಾನ್ ವ್ಯಕ್ತಿ ಶ್ರೀ ಎಂ.ಜಿ.ಆರ್. ಅವರ ಜನ್ಮದಿನವಾಗಿದ್ದು, ನಾವು ಅವರ ಜೀವನವನ್ನು ನೆನಪಿಸಿಕೊಳ್ಳುತ್ತೇವೆ ಮತ್ತು ಆಚರಿಸುತ್ತೇವೆ. ಅವರು ತಮಿಳು ಚಿತ್ರರಂಗದ ನಿಜವಾದ ಮಾದರಿ ವ್ಯಕ್ತಿಯಾಗಿದ್ದರು ಮತ್ತು ದೂರದೃಷ್ಟಿಯ ನಾಯಕರಾಗಿದ್ದರು. ವಿಶೇಷವಾಗಿ ಸಾಮಾಜಿಕ ನ್ಯಾಯ ಮತ್ತು ಸಹಾನುಭೂತಿಯ ಕುರಿತಾದ ಅವರ ಚಲನಚಿತ್ರಗಳು, ಬೆಳ್ಳಿ ಪರದೆಯಿಂದಾಚೆಗೆ ಹೃದಯಗಳನ್ನು ಗೆದ್ದಿವೆ. ಜನನಾಯಕನಾಗಿ ಮತ್ತು ಮುಖ್ಯಮಂತ್ರಿಯಾಗಿ, ಅವರು ಜನರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಿದರು, ಹಾಗೂ ತಮಿಳುನಾಡಿನ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿದರು. ಅವರ ಕೆಲಸವು ನಮಗೆ ಸದಾ ಸ್ಫೂರ್ತಿ ನೀಡುತ್ತಿದೆ. ”

 "தலைசிறந்த எம்.ஜி.ஆர் அவர்களின் பிறந்த தினத்தை நினைவு கூர்ந்து அவரது வாழ்க்கையை இன்று கொண்டாடுகிறோம். அவர் தமிழ் சினிமாவின் உண்மையான அடையாளமாகவும், தொலைநோக்கு மிக்க தலைவராகவும் இருந்தார்.  அவரது திரைப் படங்களில் நிறைந்திருந்த சமூக நீதி மற்றும் கருணை ஆகியவை, வெள்ளித்திரைக்கு அப்பாலும் இதயங்களை வென்றன.  தலைவராகவும், முதலமைச்சராகவும் மக்கள் நலனுக்காக அயராது உழைத்தவர், தமிழகத்தின் வளர்ச்சி மற்றும் மேம்பாட்டில் நீடித்த தாக்கத்தை ஏற்படுத்தியவர். அவரது பணி தொடர்ந்து நமக்கு ஊக்கம் அளிக்கிறது."
 

 

***



(Release ID: 1996999) Visitor Counter : 54