ಪ್ರಧಾನ ಮಂತ್ರಿಯವರ ಕಛೇರಿ

​​​​​​​ಪ್ರಾಣ ಪ್ರತಿಷ್ಠೆಯ  ಶುಭಾಶಯಗಳಿಗಾಗಿ ರಾಷ್ಟ್ರಪತಿಗಳಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ

Posted On: 21 JAN 2024 11:30PM by PIB Bengaluru

ಅಯೋಧ್ಯಾ ಧಾಮದ ಶ್ರೀ ರಾಮ ದೇವಾಲಯದಲ್ಲಿ  ನಾಳೆ ನಿಗದಿಯಾಗಿರುವ ಪ್ರಾಣ ಪ್ರತಿಷ್ಠೆಗೆ  ಶುಭಾಶಯಗಳನ್ನು ಕೋರಿರುವ  ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಈ ಐತಿಹಾಸಿಕ ಕ್ಷಣವು ರಾಷ್ಟ್ರದ ಪರಂಪರೆ ಮತ್ತು ಸಂಸ್ಕೃತಿಯನ್ನು ಶ್ರೀಮಂತಗೊಳಿಸುವುದರ ಜೊತೆಗೆ ಭಾರತದ ಅಭಿವೃದ್ಧಿಯ ಪ್ರಯಾಣವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಪ್ರಾಣ ಪ್ರತಿಷ್ಠೆಯ  ಮುನ್ನಾದಿನದಂದು ರಾಷ್ಟ್ರಪತಿಗಳು ಪ್ರಧಾನಿ ಅವರಿಗೆ ಪತ್ರ ಬರೆದಿದ್ದರು.

ಪ್ರಧಾನ ಮಂತ್ರಿ  ಮೋದಿ ಅವರು  ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"माननीय @rashtrapatibhvn जी, 

अयोध्या धाम में राम लला की प्राण-प्रतिष्ठा के पावन अवसर पर शुभकामनाओं के लिए आपका बहुत-बहुत आभार। मुझे विश्वास है कि यह ऐतिहासिक क्षण भारतीय विरासत एवं संस्कृति को और समृद्ध करने के साथ ही हमारी विकास यात्रा को नए उत्कर्ष पर ले जाएगा।

***



(Release ID: 1998589) Visitor Counter : 64