ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪರಾಕ್ರಮ ದಿನದಂದು ಭಾರತದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 23 JAN 2024 9:20AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪರಾಕ್ರಮ ದಿನದಂದು ಭಾರತದ ಜನತೆಗೆ ಶುಭ ಕೋರಿದ್ದಾರೆ.

ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ. ಪ್ರಧಾನಮಂತ್ರಿಯವರು ನೇತಾಜಿಯವರ ಜೀವನ ಮತ್ತು ಧೈರ್ಯವನ್ನು ಗೌರವಿಸಿದ್ದಾರೆ.

Xಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು;

"ಪರಾಕ್ರಮ ದಿನದಂದು ಭಾರತದ ಜನತೆಗೆ ಶುಭಾಶಯಗಳು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ. ನಾವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಮತ್ತು ಧೈರ್ಯವನ್ನು ಗೌರವಿಸುತ್ತೇವೆ. ನಮ್ಮ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಅವರ ಅಚಲ ಸಮರ್ಪಣೆಯು ಸ್ಫೂರ್ತಿದಾಯಕವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

********


(रिलीज़ आईडी: 1998841) आगंतुक पटल : 148
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali-TR , Bengali , Manipuri , Assamese , Punjabi , Gujarati , Odia , Tamil , Telugu , Malayalam