ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 26 JAN 2024 3:37PM by PIB Bengaluru

ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರದ್ಧಾಂಜಲಿ ಸಲ್ಲಿಸಿದರು.

“ನಮ್ಮ ದೇಶವನ್ನು ನಿಸ್ವಾರ್ಥವಾಗಿ ರಕ್ಷಿಸಿದವರನ್ನು ನಾವು ಸ್ಮರಿಸುತ್ತೇವೆ ಮತ್ತು ಗೌರವಿಸುತ್ತೇವೆ” ಎಂದು ಪ್ರಧಾನಮಂತ್ರಿಯವರು ಹೇಳಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ರೀತಿ ಸಂದೇಶ ಕಳುಹಿಸಿದ್ದಾರೆ:

"ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ನಿಸ್ವಾರ್ಥವಾಗಿ ನಮ್ಮ ದೇಶವನ್ನು ರಕ್ಷಿಸಿದವರನ್ನು ನಾವು ಸ್ಮರಿಸುತ್ತೇವೆ ಮತ್ತು ಗೌರವಿಸುತ್ತೇವೆ. ಅವರ ಧೈರ್ಯ ಮತ್ತು ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ. ನಾವು ಅವರಿಗೆ ಗೌರವ ಮತ್ತು ಕೃತಜ್ಞತೆಯಿಂದ ನಮಸ್ಕರಿಸುತ್ತೇವೆ, ಅವರ ಆದರ್ಶಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆ ಮಾಡುತ್ತೇವೆ."


(ಪ್ರಕಟಣೆ ಐ.ಡಿ.: 1999921) ವಿಸಿಟರ್ ಕೌಂಟರ್ : 157