ಪ್ರಧಾನ ಮಂತ್ರಿಯವರ ಕಛೇರಿ

​​​​​​​ಅರುಣಾಚಲ ಪ್ರದೇಶ ಜನರಿಗೆ ರಾಜ್ಯೋತ್ಸವ ದಿನದ ಶುಭಾಶಯ ಕೋರಿದ ಪ್ರಧಾನ ಮಂತ್ರಿ 

Posted On: 20 FEB 2024 10:59AM by PIB Bengaluru

ಪ್ರಧಾ ನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಜನತೆಗೆ ರಾಜ್ಯೋತ್ಸವ ದಿನದ ಶುಭ ಹಾರೈಸಿದ್ದಾರೆ. ಅರುಣಾಚಲ ಪ್ರದೇಶವು ಮುಂದಿನ ವರ್ಷಗಳಲ್ಲಿ ಸಮೃದ್ಧವಾಗಿರಲಿ ಎಂದು ಶ್ರೀ ಮೋದಿ ಅವರು ಹಾರೈಸಿದರು.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ;“ಅರುಣಾಚಲ ಪ್ರದೇಶ ರಾಜ್ಯೋತ್ಸವ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳು. ಅರುಣಾಚಲ ಪ್ರದೇಶದ ಜನರು ಭಾರತದ ಅಭಿವೃದ್ಧಿಗೆ ಶ್ರೀಮಂತ ಕೊಡುಗೆಗಳನ್ನು ನೀಡುತ್ತಿದ್ದಾರೆ. ರಾಜ್ಯದ ಸಂಸ್ಕೃತಿಯು ವಿಶೇಷವಾಗಿ ರೋಮಾಂಚಕ ಬುಡಕಟ್ಟು ಸಂಪ್ರದಾಯಗಳು ಮತ್ತು ಶ್ರೀಮಂತ ಜೀವವೈವಿಧ್ಯತೆಯನ್ನು ಹೊಂದಿದೆ. ಅರುಣಾಚಲ ಪ್ರದೇಶ ರಾಜ್ಯವು ಮುಂದಿನ ವರ್ಷಗಳಲ್ಲಿ ಸಮೃದ್ಧಿಯಾಗಲಿ” ಎಂದು ಪ್ರಧಾನಿ ಶುಭ ಹಾರೈಸಿದ್ದಾರೆ.

 

****



(Release ID: 2007352) Visitor Counter : 42