ಪ್ರಧಾನ ಮಂತ್ರಿಯವರ ಕಛೇರಿ

​​​​​​​ಲಖಿಸರಾಯ್ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಿಯವರಿಂದ ಸಂತಾಪ ಸೂಚನೆ

Posted On: 21 FEB 2024 12:37PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಲಖಿಸರಾಯ್ ರಸ್ತೆ ಅಪಘಾತದಲ್ಲಿ ಮಡಿದವರ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. 
ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದರು.

ಪ್ರಧಾನ ಮಂತ್ರಿಯವರ ಕಛೇರಿಯು Xನಲ್ಲಿ:

"ಬಿಹಾರದ ಲಖಿಸರಾಯ್ ನಲ್ಲಿ ನಡೆದ ರಸ್ತೆ ಅಪಘಾತವು ತುಂಬಾ ದುಃಖಕರವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯವಾಗಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ದೊರಕಿಸಲು ನಿಯೋಜಿಸಲಾಗಿದೆ" ಎಂದು ಪೋಸ್ಟ್ ಮಾಡಿದೆ.

***



(Release ID: 2007626) Visitor Counter : 46