ಪ್ರಧಾನ ಮಂತ್ರಿಯವರ ಕಛೇರಿ

ಮಧ್ಯಪ್ರದೇಶದ ದಿಂಡೋರಿಯಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Posted On: 29 FEB 2024 1:14PM by PIB Bengaluru

ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ. 

ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(PMNRF)ಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ. 

ಈ ಕುರಿತು ಟ್ವೀಟ್ ಮೂಲಕ ಪ್ರಕಟಿಸಿರುವ ಪ್ರಧಾನ ಮಂತ್ರಿ ಕಾರ್ಯಾಲಯವು,

ಮಧ್ಯ ಪ್ರದೇಶದ ದಿಂಡೋರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದೆ.

***



(Release ID: 2010179) Visitor Counter : 53