ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ
ಶ್ರೀ ನಿತಿನ್ ಗಡ್ಕರಿ ಅವರು ಕರ್ನಾಟಕದಲ್ಲಿ ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-373ರ ಯಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿ ಭಾಗದ ಚತುಷ್ಪಥಕ್ಕೆ 576.22 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ.
Posted On:
15 MAR 2024 11:31AM by PIB Bengaluru
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ಕರ್ನಾಟಕದಲ್ಲಿ, ಹಾಸನ ಜಿಲ್ಲೆಯ ಎನ್ ಎಚ್-373ರ 22.3 ಕಿಲೋಮೀಟರ್ ಉದ್ದದ ಯಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿ ಭಾಗದ ಚತುಷ್ಪಥಕ್ಕೆ ₹576.22 ಕೋಟಿ ಮಂಜೂರು ಮಾಡಲಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟಿನಲ್ಲಿ ತಿಳಿಸಿದ್ದಾರೆ.
ಚಿಕ್ಕಮಗಳೂರು, ಬೇಲೂರು, ಹಳಿಬೀಡು ಮತ್ತು ಶ್ರವಣಬೆಳಗುಳದಂತಹ ಜನಪ್ರಿಯ ಪ್ರವಾಸಿ ತಾಣಗಳಿಗೆ ಈ ಕಾರಿಡಾರ್ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶ್ರೀ ಗಡ್ಕರಿ ಹೇಳಿದ್ದಾರೆ. ಈ ಯೋಜನೆಯ ಅನುಷ್ಠಾನವು ಸಂಪರ್ಕವನ್ನು ಹೆಚ್ಚಿಸುವುದಲ್ಲದೆ, ಇದು ಪ್ರವಾಸೋದ್ಯಮವನ್ನು ಮತ್ತು ಈ ಪ್ರದೇಶದೊಳಗೆ ಆರ್ಥಿಕ ಉದ್ಯಮಗಳನ್ನು ಉತ್ತೇಜಿಸುತ್ತದೆ.
******
(Release ID: 2014868)