ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಡಾ.ವೀರೇಂದ್ರ ಕುಮಾರ್ ಅವರು ಅಧಿಕಾರ ಸ್ವೀಕಾರ
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಹಾಯಕ ಸಚಿವರಾಗಿ ಶ್ರೀ ರಾಮದಾಸ್ ಅಠಾವಳೆ ಅವರು ಅಧಿಕಾರ ಸ್ವೀಕಾರ
Posted On:
11 JUN 2024 4:19PM by PIB Bengaluru
ಡಾ. ವೀರೇಂದ್ರ ಕುಮಾರ್ ಅವರು ಇಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಡಾ. ಕುಮಾರ್ ಅವರು ಈ ಜವಾಬ್ದಾರಿಯನ್ನು ತಮಗೆ ವಹಿಸಿಕೊಟ್ಟಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
![](https://static.pib.gov.in/WriteReadData/userfiles/image/image00162GL.jpg)
ಈ ಸಂದರ್ಭದಲ್ಲಿ ಸಹಾಯಕ ಸಚಿವರಾದ ಶ್ರೀ ರಾಮದಾಸ್ ಅಠಾವಳೆ ಮತ್ತು ಶ್ರೀ ಬಿ.ಎಲ್.ವರ್ಮಾ ಅವರೊಂದಿಗೆ ಸಚಿವಾಲಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
![](https://static.pib.gov.in/WriteReadData/userfiles/image/image002A3EG.jpg)
ನಂತರ, ಡಾ. ಕುಮಾರ್ ಅವರು ಸಹಾಯಕ ಸಚಿವರಾದ ಶ್ರೀ ರಾಮದಾಸ್ ಅಠಾವಳೆ ಮತ್ತು ಶ್ರೀ ಬಿ.ಎಲ್.ವರ್ಮಾ ಅವರೊಂದಿಗೆ ಸಚಿವಾಲಯದ ಈವರೆಗಿನ ಸಾಧನೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪಕ್ಕೆ ಸಂಬಂಧಿಸಿದಂತೆ ಭವಿಷ್ಯದ ಮಾರ್ಗಸೂಚಿಯ ಬಗ್ಗೆ ಚರ್ಚಿಸಿದರು.
![](https://static.pib.gov.in/WriteReadData/userfiles/image/image00364Q0.jpg)
ಶ್ರೀ ರಾಮದಾಸ್ ಅಠಾವಳೆ ಅವರು ಕೂಡಾ ಇಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಹಾಯಕ ಸಚಿವರಾಗಿ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀ ಅಠಾವಳೆ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಧ್ಯೇಯಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದರು.
*****
(Release ID: 2024458)
Visitor Counter : 20
Read this release in:
Punjabi
,
Odia
,
English
,
Urdu
,
Hindi
,
Hindi_MP
,
Marathi
,
Gujarati
,
Tamil
,
Telugu
,
Malayalam