ಭಾರೀ ಕೈಗಾರಿಕೆಗಳ ಸಚಿವಾಲಯ
ಕೇಂದ್ರ ಸಚಿವ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಭಾರೀ ಕೈಗಾರಿಕೆಗಳ ಸಚಿವಾಲಯದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು
प्रविष्टि तिथि:
12 JUN 2024 7:15PM by PIB Bengaluru
ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಇಲ್ಲಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಭಾರೀ ಕೈಗಾರಿಕೆಗಳ ಕಾರ್ಯದರ್ಶಿ ಶ್ರೀ ಕಮ್ರಾನ್ ರಿಜ್ವಿ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಸಭೆಯಲ್ಲಿ ಸಚಿವರಿಗೆ ಸಚಿವಾಲಯದ ಬಗ್ಗೆ ವಿವರಗಳನ್ನು ನೀಡಲಾಯಿತು ಮತ್ತು ಸಚಿವಾಲಯದ ಪ್ರಸ್ತುತ ವಿವಿಧ ಯೋಜನೆಗಳು ಮತ್ತು ಚಟುವಟಿಕೆಗಳ ಬಗ್ಗೆ ತಿಳಿಸಲಾಯಿತು. ಸಭೆಯಲ್ಲಿ ರಫ್ತುಗಳನ್ನು ಹೆಚ್ಚಿಸುವುದು, ಸುಸ್ಥಿರತೆಯನ್ನು ಉತ್ತೇಜಿಸುವುದು, ಉದ್ಯೋಗ ಸೃಷ್ಟಿ ಮತ್ತು ಉದ್ಯೋಗಿಗಳ ಕೌಶಲ್ಯಗಳನ್ನು ಹೆಚ್ಚಿಸುವುದು ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಚರ್ಚೆಗಳು ಒಳನೋಟ ಮತ್ತು ಮುಂದಾಲೋಚನೆಯಿಂದ ಕೂಡಿದ್ದವು.


*****
(रिलीज़ आईडी: 2024838)
आगंतुक पटल : 133