ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕುವೈತ್ ನಗರದಲ್ಲಿ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಿ ಸಂತಾಪ 

प्रविष्टि तिथि: 12 JUN 2024 7:17PM by PIB Bengaluru

ಕುವೈತ್ ನಗರದಲ್ಲಿ ಅಗ್ನಿ ಅವಘಡದಿಂದ ಸಂಭವಿಸಿದ ಜೀವಗಳ ಹಾನಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಸಂತ್ರಸ್ತರಿಗೆ ಸಹಾಯ ಮಾಡಲು ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದರು.

ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ “ಎಕ್ಸ್‌” ಪೋಸ್ಟ್ ಹಂಚಿಕೊಂಡಿರುವ ಪ್ರಧಾನ ಮಂತ್ರಿ;

“ಕುವೈತ್ ಸಿಟಿಯಲ್ಲಿ ಸಂಭವಿಸಿದ ಅಗ್ನಿ ದುರಂತ ದುಃಖ ತಂದಿದೆ. ಅಪಘಾತದಲ್ಲಿ ಮಡಿದವರ ಸಂಬಂಧಿಕರು ಮತ್ತು ಆತ್ಮೀಯರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ” ಎಂದು ಧೈರ್ಯ ತುಂಬಿದ್ದಾರೆ.

 


*****


(रिलीज़ आईडी: 2025006) आगंतुक पटल : 94
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Hindi_MP , Bengali , Manipuri , Assamese , Punjabi , Gujarati , Tamil , Telugu , Malayalam