ಹಣಕಾಸು ಸಚಿವಾಲಯ

2024-25ರ ಕೇಂದ್ರ ಬಜೆಟ್‌ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಕ್ಕೆ ₹ 1.52 ಲಕ್ಷ ಕೋಟಿ  


ಖಾರಿಫ್‌ ಗೆ ಡಿಜಿಟಲ್ ಬೆಳೆ ಸಮೀಕ್ಷೆ - ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಳಸಿಕೊಂಡು 400 ಜಿಲ್ಲೆಗಳಲ್ಲಿ ನಡೆಸಲಾಗುವುದು

ಎಣ್ಣೆ ಬೀಜಗಳಿಗಾಗಿ 'ಆತ್ಮನಿರ್ಭರತೆ' ಸಾಧಿಸಲು ಕಾರ್ಯತಂತ್ರ ಸಿದ್ಧಪಡಿಸಲಾಗುತ್ತಿದೆ

ತರಕಾರಿ ಉತ್ಪಾದನೆಗಾಗಿ ದೊಡ್ಡ ಪ್ರಮಾಣದ ಕ್ಲಸ್ಟರ್‌ಗಳನ್ನು ಪ್ರಮುಖ ಬಳಕೆ ಕೇಂದ್ರಗಳ ಬಳಿ ಅಭಿವೃದ್ಧಿಪಡಿಸಲಾಗುವುದು

ಸೀಗಡಿಗಾಗಿ ನ್ಯೂಕ್ಲಿಯಸ್ ಸಂತಾನೋತ್ಪತ್ತಿ ಕೇಂದ್ರಗಳ ಜಾಲವನ್ನು ಸ್ಥಾಪಿಸಲು ಬಜೆಟ್‌ನಲ್ಲಿ ಆರ್ಥಿಕ ನೆರವು ಘೋಷಿಸಲಾಗಿದೆ

Posted On: 23 JUL 2024 12:59PM by PIB Bengaluru

ಕೃಷಿ ವಲಯದಲ್ಲಿ ಉತ್ಪಾದಕತೆ ಮತ್ತು ಚೇತರಿಕೆಯನ್ನು ಹೆಚ್ಚಿಸುವ ಕ್ರಮಗಳ ಭಾಗವಾಗಿ, ಕೇಂದ್ರ ಬಜೆಟ್ 2024-25 ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಎಣ್ಣೆ ಬೀಜಗಳಿಗೆ 'ಆತ್ಮನಿರ್ಭರತೆ', ತರಕಾರಿ ಉತ್ಪಾದನೆಗೆ ದೊಡ್ಡ ಪ್ರಮಾಣದ ಕ್ಲಸ್ಟರ್‌ಗಳು ಮತ್ತು ಸೀಗಡಿ ನ್ಯೂಕ್ಲಿಯಸ್ ಬ್ರೀಡಿಂಗ್ ಸೆಂಟರ್‌ಗಳ ಜಾಲಕ್ಕಾಗಿ  ಹಣಕಾಸಿನ ನೆರವು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದೆ.  

ಕೃಷಿಗಾಗಿ ಸಾರ್ವಜನಿಕ ಡಿಜಿಟಲ್ ಮೂಲಸೌಕರ್ಯ

ಪ್ರಾಯೋಗಿಕ ಯೋಜನೆಯ ಯಶಸ್ಸಿನಿಂದ ಉತ್ತೇಜಿತವಾಗಿರುವ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ರೈತರು ಮತ್ತು ಅವರ ಜಮೀನುಗಳ ವ್ಯಾಪ್ತಿಗಾಗಿ ಕೃಷಿಯಲ್ಲಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ) ಅನುಷ್ಠಾನವನ್ನು 3 ವರ್ಷಗಳಲ್ಲಿ  ಮಾಡಲಾಗುವುದು. ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2024-25 ನೇ ಸಾಲಿನ ಬಜೆಟ್ ಮಂಡಿಸಿದ ಸಂದರ್ಭದಲ್ಲಿ, ಈ ವರ್ಷದಲ್ಲಿ 400 ಜಿಲ್ಲೆಗಳಲ್ಲಿ ಡಿಪಿಐ ಬಳಸಿ ಖಾರಿಫ್‌ಗಾಗಿ ಡಿಜಿಟಲ್ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. 6 ಕೋಟಿ ರೈತರು ಮತ್ತು ಅವರ ಜಮೀನುಗಳ ವಿವರವನ್ನು ರೈತರು ಮತ್ತು ಭೂ ನೋಂದಣಿಯಲ್ಲಿ ದಾಖಲಿಸಲಾಗುವುದು ಎಂದು ಹೇಳಿದರು. ಐದು ರಾಜ್ಯಗಳಲ್ಲಿ ಜನ್ ಸಮರ್ಥ್ ಆಧಾರಿತ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ನೀಡಲಾಗುವುದು ಎಂದು ಶ್ರೀಮತಿ ಸೀತಾರಾಮನ್ ಹೇಳಿದರು.

ಬೇಳೆಕಾಳು ಮತ್ತು ಎಣ್ಣೆಕಾಳುಗಳ ಮಿಷನ್‌

ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳಲ್ಲಿ ಸ್ವಾವಲಂಬನೆ ಸಾಧಿಸಲು, ಸರ್ಕಾರವು ಅವುಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರುಕಟ್ಟೆಯನ್ನು ಬಲಪಡಿಸುತ್ತದೆ. ಇಂದು 2024-25 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ  ಮಂಡಿಸುವಾಗ, ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದಂತೆ ಎಣ್ಣೆ ಕಾಳುಗಳಾದ ಸಾಸಿವೆ, ಶೇಂಗಾ, ಎಳ್ಳು, ಸೋಯಾಬೀನ್ ಮತ್ತು ಸೂರ್ಯಕಾಂತಿಗಳಿಗೆ ‘ಆತ್ಮನಿರ್ಭರತೆ’ ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಹೇಳಿದರು.

ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳು

ಪ್ರಮುಖ ಬಳಕೆ ಕೇಂದ್ರಗಳ ಬಳಿಯಲ್ಲಿ ತರಕಾರಿ ಉತ್ಪಾದನೆಗೆ ದೊಡ್ಡ ಪ್ರಮಾಣದ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು. ತರಕಾರಿಗಳ ಸಂಗ್ರಹಣೆ, ಸಂಗ್ರಹಣೆ ಮತ್ತು ಮಾರುಕಟ್ಟೆ ಸೇರಿದಂತೆ ತರಕಾರಿ ಪೂರೈಕೆ ಸರಪಳಿಗಳಿಗಾಗಿ ಸರ್ಕಾರ ರೈತ-ಉತ್ಪಾದಕರ ಸಂಸ್ಥೆಗಳು, ಸಹಕಾರಿ ಸಂಸ್ಥೆಗಳು ಮತ್ತು ನವೋದ್ಯಮಗಳನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದರು.

ಸೀಗಡಿ ಉತ್ಪಾದನೆ ಮತ್ತು ರಫ್ತು

ಸೀಗಡಿ ನ್ಯೂಕ್ಲಿಯಸ್ ಬ್ರೀಡಿಂಗ್ ಸೆಂಟರ್‌ಗಳ ಜಾಲವನ್ನು ಸ್ಥಾಪಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದರು. ನಬಾರ್ಡ್ ಮೂಲಕ ಸೀಗಡಿ ಸಾಕಾಣಿಕೆ, ಸಂಸ್ಕರಣೆ ಮತ್ತು ರಫ್ತಿಗೆ ಹಣಕಾಸು ಒದಗಿಸಲಾಗುವುದು ಎಂದು ಶ್ರೀಮತಿ  ಸೀತಾರಾಮನ್ ಹೇಳಿದರು.

ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಒಂಬತ್ತು ಆದ್ಯತೆಯ ಕ್ಷೇತ್ರಗಳಲ್ಲಿ ಕೃಷಿಯಲ್ಲಿ ಉತ್ಪಾದಕತೆ ಮತ್ತು ಚೇತರಿಕೆಯು ಮೊದಲನೆಯದಾಗಿದೆ. 2024-25ರ ಬಜೆಟ್‌ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಕ್ಕೆ ₹ 1.52 ಲಕ್ಷ ಕೋಟಿ ಅನುದಾನ ನೀಡಲಾಗಿದೆ. ನಾಲ್ಕು ಪ್ರಮುಖ ಜಾತಿಗಳಲ್ಲಿ ‘ಅನ್ನದಾತ’ (ರೈತ) ಒಂದು ಎಂದು ಬಣ್ಣಿಸಿದ ಸಚಿವರು, ಸರ್ಕಾರವು ಎಲ್ಲಾ ಪ್ರಮುಖ ಬೆಳೆಗಳಿಗೆ ಒಂದು ತಿಂಗಳ ಹಿಂದೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಗಳನ್ನು ಘೋಷಿಸಿದೆ, ವೆಚ್ಚದ ಮೇಲೆ ಕನಿಷ್ಠ ಶೇಕಡಾ 50ರಷ್ಟು ಲಾಭದ  ಭರವಸೆಯನ್ನು ಈಡೇರಿಸಿದೆ ಎಂದು ಹೇಳಿದರು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಐದು ವರ್ಷಗಳವರೆಗೆ ವಿಸ್ತರಿಸಲಾಗಿದ್ದು, 80 ಕೋಟಿಗೂ ಹೆಚ್ಚು ಜನರಿಗೆ ಇದರಿಂದ ಪ್ರಯೋಜನವಾಗಿದೆ ಎಂದು ಅವರು ಹೇಳಿದರು.

 

*****



(Release ID: 2036687) Visitor Counter : 13