ಪ್ರಧಾನ ಮಂತ್ರಿಯವರ ಕಛೇರಿ

ಭಾರತೀಯ ಕೈಗಾರಿಕೆಗಳ ಒಕ್ಕೂಟದ ಬಜೆಟ್ ನಂತರದ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜುಲೈ 30 ರಂದು ಪ್ರಧಾನಮಂತ್ರಿ ಭಾಷಣ 

Posted On: 29 JUL 2024 12:08PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ  2024 ರ ಜುಲೈ 30 ರಂದು ನಡೆಯಲಿರುವ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮಾವೇಶ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಈ ಸಮಾವೇಶವನ್ನು ಆಯೋಜಿಸಿದ್ದು ಸರ್ಕಾರದ ಪ್ರಗತಿಯ ವಿಸ್ತೃತ ನೋಟಕ್ಕೆ‌ ರೂಪುರೇಷೆ ಹಾಕಿಕೊಡುವ ಮತ್ತು ಈ‌ ಪ್ರಯತ್ನದಲ್ಲಿ ಕೈಗಾರಿಕೆಗಳ ಪಾತ್ರದ ಬಗ್ಗೆ ಬೆಳಕು ಚೆಲ್ಲುವ ಉದ್ದೇಶ ಹೊಂದಿದೆ. 

ಕೈಗಾರಿಕೆಗಳು, ಸರ್ಕಾರ, ರಾಜತಾಂತ್ರಿಕ ಸಮುದಾಯ, ಚಿಂತಕರ ಚಾವಡಿ ಮೊದಲಾದ 1000 ಕ್ಕೂ ಪ್ರತಿನಿಧಿಗಳು ಸಮಾವೇಶದಲ್ಲಿ ವ್ಯಕ್ತಿಗತವಾಗಿ ಪಾಲ್ಗೊಳ್ಳಲಿದ್ದು ವಿವಿಧ ಸಿಐಐ ಕೇಂದ್ರಗಳ ದೇಶ ವಿದೇಶಗಳ ಪ್ರತಿನಿಧಿಗಳು ಆನ್ಲೈನ್ ಮೂಲಕ ಪಾಲ್ಗೊಳ್ಳಲಿದ್ದಾರೆ.

 

*****
 



(Release ID: 2038597) Visitor Counter : 32