ಪ್ರಧಾನ ಮಂತ್ರಿಯವರ ಕಛೇರಿ

ಆಗಸ್ಟ್ 11 ರಂದು 109 ಅಧಿಕ ಇಳುವರಿ ನೀಡುವ, ಹವಾಮಾನ ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳನ್ನು ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

Posted On: 10 AUG 2024 2:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಆಗಸ್ಟ್ 11ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 109 ಅಧಿಕ ಇಳುವರಿ ನೀಡುವ, ಹವಾಮಾನ ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಪ್ರಧಾನಮಂತ್ರಿ ಅವರು 34 ಕ್ಷೇತ್ರ ಬೆಳೆಗಳು ಮತ್ತು 27 ತೋಟಗಾರಿಕೆ ಬೆಳೆಗಳನ್ನು ಒಳಗೊಂಡಂತೆ 61 ಬೆಳೆಗಳ 109 ಪ್ರಭೇದಗಳನ್ನು ಬಿಡುಗಡೆ ಮಾಡಲಿದ್ದಾರೆ. ಕ್ಷೇತ್ರ ಬೆಳೆಗಳಲ್ಲಿ, ರಾಗಿ, ಮೇವಿನ ಬೆಳೆಗಳು, ಎಣ್ಣೆಕಾಳುಗಳು, ದ್ವಿದಳ ಧಾನ್ಯಗಳು, ಕಬ್ಬು, ಹತ್ತಿ, ನಾರು ಮತ್ತು ಇತರ ಸಂಭಾವ್ಯ ಬೆಳೆಗಳು ಸೇರಿದಂತೆ ವಿವಿಧ ಧಾನ್ಯಗಳ ಬೀಜಗಳನ್ನು ಬಿಡುಗಡೆ ಮಾಡಲಾಗುವುದು. ತೋಟಗಾರಿಕೆ ಬೆಳೆಗಳಲ್ಲಿ ವಿವಿಧ ರೀತಿಯ ಹಣ್ಣುಗಳು, ತರಕಾರಿ ಬೆಳೆಗಳು, ತೋಟಗಾರಿಕಾ ಬೆಳೆಗಳು, ಗೆಡ್ಡೆ ಬೆಳೆಗಳು, ಸಾಂಬಾರ ಪದಾರ್ಥಗಳು, ಹೂವುಗಳು ಮತ್ತು ಔಷಧೀಯ ಬೆಳೆಗಳು ಬಿಡುಗಡೆಯಾಗಲಿವೆ.

ಪ್ರಧಾನಮಂತ್ರಿ ಅವರು ಯಾವಾಗಲೂ ಸುಸ್ಥಿರ ಕೃಷಿ ಮತ್ತು ಹವಾಮಾನ ಸ್ಥಿತಿಸ್ಥಾಪಕ ವಿಧಾನಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಿದ್ದಾರೆ. ಭಾರತವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ಮಧ್ಯಾಹ್ನದ ಊಟ, ಅಂಗನವಾಡಿ ಮುಂತಾದ ಹಲವಾರು ಸರ್ಕಾರಿ ಕಾರ್ಯಕ್ರಮಗಳೊಂದಿಗೆ ಸಂಪರ್ಕಿಸುವ ಮೂಲಕ ಜೈವಿಕ ಬಲವರ್ಧಿತ ಬೆಳೆಗಳನ್ನು ಉತ್ತೇಜಿಸಲು ಅವರು ಒತ್ತು ನೀಡಿದ್ದಾರೆ. ಈ ಕ್ರಮಗಳು ರೈತರಿಗೆ ಉತ್ತಮ ಆದಾಯವನ್ನು ಖಾತ್ರಿಪಡಿಸುತ್ತವೆ ಮತ್ತು ಅವರಿಗೆ ಉದ್ಯಮಶೀಲತೆಯ ಹೊಸ ಮಾರ್ಗಗಳನ್ನು ತೆರೆಯುತ್ತವೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದ್ದಾರೆ. ಅಧಿಕ ಇಳುವರಿ ನೀಡುವ 109 ತಳಿಗಳನ್ನು ಬಿಡುಗಡೆ ಮಾಡುವ ಈ ಹೆಜ್ಜೆಯು ಈ ದಿಕ್ಕಿನಲ್ಲಿ ಮತ್ತೊಂದು ಮೈಲಿಗಲ್ಲಾಗಿದೆ.

 

*****



(Release ID: 2044122) Visitor Counter : 37