ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ತನಾಹುನ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ

Posted On: 24 AUG 2024 2:51PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ. ಪಿಎಂಎನ್ಆರ್ಎಫ್ ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;

"ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪಿಎಂಎನ್ಆರ್ ಎಫ್ ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನ ಮಂತ್ರಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಪರಿಹಾರ ಘೋಷಿಸಿದ್ದಾರೆ,’’ ಎಂದು ತಿಳಿಸಿದೆ.

 

 

*****



(Release ID: 2048664) Visitor Counter : 9