ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕಾರ್ಮಿಕ ಸುಧಾರಣೆಗಳು ಮತ್ತು ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವ ಕುರಿತು ಚರ್ಚಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಬೆಂಗಳೂರಿನಲ್ಲಿ ಪ್ರಾದೇಶಿಕ ಸಭೆ ನಡೆಸಲಿದೆ

Posted On: 29 AUG 2024 2:34PM by PIB Bengaluru

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ 30.08.2024 ರಂದು ಬೆಂಗಳೂರಿನಲ್ಲಿ ಪ್ರಾದೇಶಿಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಕೇರಳ, ಪುದುಚೇರಿ ಮತ್ತು ಅಂಡಮಾನ್ & ನಿಕೋಬಾರ್ ದ್ವೀಪಗಳು ಸೇರಿದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಭಾಗವಹಿಸಲಿವೆ.  ಸಭೆಯಲ್ಲಿ ಕಾರ್ಮಿಕ ಸುಧಾರಣೆಗಳು, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು (BOCW), ಇಎಸ್‌ಐಸಿ, ಇ-ಶ್ರಮ್ ಮತ್ತು ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲಾಗುವುದು.

ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ರಚಿಸಿದ ನಿಯಮಗಳಲ್ಲಿ ಸಾಮರಸ್ಯತೆ, ಸಾಮಾಜಿಕ ಭದ್ರತಾ ಪ್ರಯೋಜನಗಳಿಗೆ ಸುಲಭ ಪ್ರವೇಶಕ್ಕಾಗಿ ಇ-ಶ್ರಮ್ ಪೋರ್ಟಲ್ ಅನ್ನು ಏಕ ನಿಲುಗಡೆ ಪರಿಹಾರವಾಗಿ ಬಳಸುವುದು, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗಾಗಿ ಕಲ್ಯಾಣ ಯೋಜನೆಗಳ ವ್ಯಾಪ್ತಿಯನ್ನು ವಿಸ್ತರಿಸುವುದು, ಉದ್ಯೋಗಾವಕಾಶಗಳಿಗಾಗಿ ಶೈಕ್ಷಣಿಕ ಸಂಸ್ಥೆಗಳೊಂದಿಗೆ ಸಂಪರ್ಕ ಮತ್ತು ಉದ್ಯೋಗಾವಕಾಶಗಳ ಮೌಲ್ಯಮಾಪನ ಇತ್ಯಾದಿಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು..

 

*****



(Release ID: 2049969) Visitor Counter : 7