ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 25 SEP 2024 9:08AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.  ಪಂಡಿತ್ ದೀನದಯಾಳ್ ಉಪಾಧ್ಯಾಯರ ಅಂತ್ಯೋದಯ ಪರಿಕಲ್ಪನೆಯು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ಅಮೂಲ್ಯವಾದ ಪಾತ್ರವನ್ನು ವಹಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ “ಮಹಾನ್ ರಾಷ್ಟ್ರೀಯವಾದಿ ಚಿಂತಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಅವರ ಅಂತ್ಯೋದಯ ಪರಿಕಲ್ಪನೆಯು ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯನ್ನು ಸಾಧಿಸುವಲ್ಲಿ ಅಮೂಲ್ಯ ಪಾತ್ರವನ್ನು ವಹಿಸಲಿದೆ. ದೇಶಕ್ಕಾಗಿ ಅವರ ಬದ್ಧತೆ ಮತ್ತು ಸೇವೆ ಅವಿಸ್ಮರಣೀಯವಾಗಿದೆ’’ ಎಂದು ಹೇಳಿದ್ದಾರೆ.

 

 

*****



 



(Release ID: 2058845) Visitor Counter : 9