ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಮಾಜಿ ಶಾಸಕಿ ಶ್ರೀಮತಿ ಸೂರ್ಯಕಾಂತ ವ್ಯಾಸ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ

Posted On: 25 SEP 2024 7:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಜಸ್ಥಾನದ ಸುರ್ ಸಾಗರ್ ನ ಮಾಜಿ ಶಾಸಕಿ ಶ್ರೀಮತಿ ಸೂರ್ಯಕಾಂತ ವ್ಯಾಸ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ರಾಜಸ್ಥಾನದ ಸುರ್ ಸಾಗರ್ ನಲ್ಲಿ ಸಾರ್ವಜನಿಕ ಕಲ್ಯಾಣಕ್ಕಾಗಿ ಅವರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಸದಾಕಾಲ ಸ್ಮರಿಸಲಾಗುವುದು ಎಂದು ಶ್ರೀ ಮೋದಿಯವರು ಹೇಳಿದರು.

Xನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;

"ರಾಜಸ್ಥಾನದ ಸುರ್ ಸಾಗರ್ ನ ಮಾಜಿ ಶಾಸಕಿ ಮತ್ತು ಹಿರಿಯ ಬಿಜೆಪಿ ನಾಯಕಿ ಶ್ರೀಮತಿ ಸೂರ್ಯಕಾಂತ ವ್ಯಾಸ್ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಈ ಕ್ಷೇತ್ರದಲ್ಲಿ ಸಾರ್ವಜನಿಕ ಕಲ್ಯಾಣಕ್ಕಾಗಿ ಅವರು ಮಾಡಿದ ಕೆಲಸವನ್ನು ಸದಾಕಾಲ ಜನರು ನೆನಪಿಸಿಕೊಳ್ಳುತ್ತಾರೆ. ನಾನು ಇತ್ತೀಚೆಗೆ ಜೋಧಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನನ್ನನ್ನು ವಿಶೇಷವಾಗಿ ಆಶೀರ್ವದಿಸಿದಾಗ ಅವರನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ದುಃಖದ ಸಮಯದಲ್ಲಿ, ಅವರ ಅಭಿಮಾನಿಗಳು ಮತ್ತು ಕುಟುಂಬಕ್ಕೆ ನನ್ನ ಸಂತಾಪಗಳು. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ!"

 

 

*****

 



(Release ID: 2058918) Visitor Counter : 6