ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav g20-india-2023

ಪ್ರವಾಹ ಪೀಡಿತ ರಾಜ್ಯಗಳಾದ ಗುಜರಾತ್, ಮಣಿಪುರ ಮತ್ತು ತ್ರಿಪುರಾಗಳಿಗೆ ರಾಜ್ಯ ವಿಪತ್ತು ಪ್ರತಿಕ್ರಿಯಾ ನಿಧಿ (ಎಸ್ ಡಿ ಆರ್ ಎಫ್) ಯಿಂದ ಕೇಂದ್ರದ ಪಾಲು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿಯಿಂದ (ಎನ್ ಡಿ ಆರ್ ಎಫ್) ಮುಂಗಡವಾಗಿ 675 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರದ  ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಪ್ರವಾಹ ಪೀಡಿತ ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ

ಪ್ರವಾಹ ಪೀಡಿತ ಅಸ್ಸಾಂ, ಮಿಜೋರಾಂ, ಕೇರಳ, ತ್ರಿಪುರಾ, ನಾಗಾಲ್ಯಾಂಡ್, ಗುಜರಾತ್, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಣಿಪುರದಲ್ಲಿ ಹಾನಿಯನ್ನು ಸ್ಥಳದಲ್ಲೇ ಮೌಲ್ಯಮಾಪನಕ್ಕಾಗಿ ಅಂತರ ಸಚಿವಾಲಯದ ಕೇಂದ್ರ ತಂಡಗಳನ್ನು (ಐಎಂಸಿಟಿ) ನಿಯೋಜಿಸಲಾಗಿದೆ

ಇತ್ತೀಚೆಗೆ ಪ್ರವಾಹದಿಂದ ಹಾನಿಗೊಳಗಾದ ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿನ ಹಾನಿಯನ್ನು  ಸ್ಥಳದಲ್ಲೇ ಮೌಲ್ಯಮಾಪನ ಮಾಡಲು ಐಎಂಸಿಟಿಗಳನ್ನು ಶೀಘ್ರದಲ್ಲೇ ಕಳುಹಿಸಲಾಗುವುದು

ಈ ವರ್ಷ ಭಾರತ ಸರ್ಕಾರವು ಎಸ್ ಡಿ ಆರ್ ಎಫ್ ನಿಂದ 21 ರಾಜ್ಯಗಳಿಗೆ 9044.80 ಕೋಟಿ ರೂ., ಎನ್ ಡಿ ಆರ್ ಎಫ್ ನಿಂದ 15 ರಾಜ್ಯಗಳಿಗೆ 4528.66 ಕೋಟಿ ರೂ., 11 ರಾಜ್ಯಗಳಿಗೆ ರಾಜ್ಯ ವಿಪತ್ತು ತಗ್ಗಿಸುವ ನಿಧಿಯಿಂದ (ಎಸ್ ಡಿ ಎಂ ಎಫ್) 1385.45 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ

ಎಲ್ಲಾ ಪ್ರವಾಹ ಪೀಡಿತ ರಾಜ್ಯಗಳಿಗೆ ಅಗತ್ಯ ಎನ್ ಡಿ ಆರ್ ಎಫ್ ತಂಡಗಳು, ಸೇನಾ ತಂಡಗಳು ಮತ್ತು ವಾಯುಪಡೆಯ ಬೆಂಬಲ ಸೇರಿದಂತೆ ಎಲ್ಲಾ ಲಾಜಿಸ್ಟಿಕ್ ಸಹಾಯವನ್ನು ಕೇಂದ್ರ ಸರ್ಕಾರ ಒದಗಿಸಿದೆ

Posted On: 30 SEP 2024 7:45PM by PIB Bengaluru

ರಾಜ್ಯ ವಿಪತ್ತು ಪ್ರತಿಕ್ರಿಯಾ ನಿಧಿಯಿಂದ (ಎಸ್ಡಿಆರ್ಎಫ್) ಕೇಂದ್ರದ ಪಾಲಿನ ನೆರವಾಗಿ ಗುಜರಾತಿಗೆ  600 ಕೋಟಿ ರೂ., ಮಣಿಪುರಕ್ಕೆ 50 ಕೋಟಿ ರೂ., ತ್ರಿಪುರಾಕ್ಕೆ 25 ಕೋಟಿ ರೂ.ಗಳನ್ನು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿಯಿಂದ (ಎನ್ಡಿಆರ್ಎಫ್) ಮುಂಗಡವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ವರ್ಷ ನೈಋತ್ಯ ಮಾನ್ಸೂನ್ ಸಮಯದಲ್ಲಿ ಅತಿ ಹೆಚ್ಚು ಮಳೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ರಾಜ್ಯಗಳು ಬಾಧಿತವಾಗಿವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಪ್ರವಾಹ ಪೀಡಿತ ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ.

ವರ್ಷ ಅಸ್ಸಾಂ, ಮಿಜೋರಾಂ, ಕೇರಳ, ತ್ರಿಪುರ, ನಾಗಾಲ್ಯಾಂಡ್, ಗುಜರಾತ್, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಣಿಪುರ ರಾಜ್ಯಗಳು ಅತಿ ಹೆಚ್ಚು ಮಳೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಬಾಧಿತವಾಗಿವೆ. ಹಾನಿಯನ್ನು ಸ್ಥಳದಲ್ಲೇ ಮೌಲ್ಯಮಾಪನ ಮಾಡಲು ಎಲ್ಲಾ ಬಾಧಿತ ರಾಜ್ಯಗಳಲ್ಲಿ ಅಂತರ ಸಚಿವಾಲಯದ ಕೇಂದ್ರ ತಂಡಗಳನ್ನು (ಐಎಂಸಿಟಿ) ನಿಯೋಜಿಸಲಾಗಿದೆ. ಐಎಂಸಿಟಿ ವರದಿಗಳು ಬಂದ ನಂತರ ಉಳಿದ ರಾಜ್ಯಗಳಿಗೆ ಹೆಚ್ಚುವರಿ ಆರ್ಥಿಕ ನೆರವು ನೀಡುವ ಬಗ್ಗೆ ನಿರ್ಧರಿಸಲಾಗುವುದು.

ಇದಲ್ಲದೆ, ಇತ್ತೀಚೆಗೆ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಸಹ ಪ್ರವಾಹದಿಂದ ಬಾಧಿತವಾಗಿವೆ ಮತ್ತು ಹಾನಿಯನ್ನು ಸ್ಥಳದಲ್ಲೇ ಮೌಲ್ಯಮಾಪನ ಮಾಡಲು ಐಎಂಸಿಟಿಗಳನ್ನು ಶೀಘ್ರದಲ್ಲೇ ರಾಜ್ಯಗಳಿಗೆ ಕಳುಹಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರವು ಎಸ್ಡಿಆರ್ಎಫ್ನಿಂದ 21 ರಾಜ್ಯಗಳಿಗೆ 9044.80 ಕೋಟಿ ರೂ., 15 ರಾಜ್ಯಗಳಿಗೆ ಎನ್ಡಿಆರ್ಎಫ್ನಿಂದ 4528.66 ಕೋಟಿ ರೂ., 11 ರಾಜ್ಯಗಳಿಗೆ ರಾಜ್ಯ ವಿಪತ್ತು ತಗ್ಗಿಸುವ ನಿಧಿಯಿಂದ (ಎಸ್ ಡಿ ಎಂ ಎಫ್) 1385.45 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆರ್ಥಿಕ ಸಹಾಯದ ಜೊತೆಗೆ, ಕೇಂದ್ರ ಸರ್ಕಾರವು ಎಲ್ಲಾ ಪ್ರವಾಹ ಪೀಡಿತ ರಾಜ್ಯಗಳಿಗೆ ಅಗತ್ಯವಾದ ಎನ್ಡಿಆರ್ಎಫ್ ತಂಡಗಳು, ಸೇನಾ ತಂಡಗಳು ಮತ್ತು ವಾಯುಪಡೆಯ ಬೆಂಬಲ ಸೇರಿದಂತೆ ಎಲ್ಲಾ ಲಾಜಿಸ್ಟಿಕ್ ಸಹಾಯವನ್ನು ಒದಗಿಸಿದೆ.

 

*****



(Release ID: 2060610) Visitor Counter : 5