ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಜಯಂತಿಯಂದು ಪ್ರಧಾನಮಂತ್ರಿಯವರಿಂದ ಅವರಿಗೆ ಗೌರವ ನಮನ

Posted On: 11 OCT 2024 8:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ದೇಶ ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದ ಶ್ರೀ ಮೋದಿ, ಶ್ರೀ ಜೆ. ಪಿ. ನಾರಾಯಣ್ ಅವರ ವ್ಯಕ್ತಿತ್ವ ಮತ್ತು ಆದರ್ಶಗಳು ಪ್ರತಿ ಪೀಳಿಗೆಗೆ ಸ್ಫೂರ್ತಿಯ ಸೆಲೆಯಾಗಿವೆ ಎಂದು ಹೇಳಿದ್ದಾರೆ.

Xನ ಪೋಸ್ಟ್ ನಲ್ಲಿ, ಅವರು:

"ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. ದೇಶ ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ವ್ಯಕ್ತಿತ್ವ ಮತ್ತು ಆದರ್ಶಗಳು ಪ್ರತಿ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತವೆ” ಎಂದು ಹೇಳಿದ್ದಾರೆ.

 

 

*****



(Release ID: 2064286) Visitor Counter : 15