ಪ್ರಧಾನ ಮಂತ್ರಿಯವರ ಕಛೇರಿ
ಪದಾತಿದಳ ದಿನದ ಅಂಗವಾಗಿ ಎಲ್ಲಾ ಶ್ರೇಣಿಯ ಸೇನಾ ಸಿಬ್ಬಂದಿ ಮತ್ತು ನಿವೃತ್ತರ ಅದಮ್ಯ ಚೈತನ್ಯ ಮತ್ತು ಧೈರ್ಯಕ್ಕೆ ಪ್ರಧಾನಮಂತ್ರಿ ಅವರಿಂದ ವಂದನೆ
ಪ್ರಕಟಣಾ ದಿನಾಂಕ:
27 OCT 2024 9:07AM by PIB Bengaluru
ಪದಾತಿ ದಳ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದಾತಿದಳದ ಎಲ್ಲಾ ಶ್ರೇಣಿಯ ಸೇನಾ ಸಿಬ್ಬಂದಿ ಮತ್ತು ನಿವೃತ್ತರ ಅದಮ್ಯ ಚೈತನ್ಯ ಮತ್ತು ಧೈರ್ಯವನ್ನು ಶ್ಲಾಘಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಪದಾತಿದಳ ದಿನದ ಅಂಗವಾಗಿ ನಾವು ದಣಿವರಿಯದೇ ನಮ್ಮನ್ನು ರಕ್ಷಿಸುವ ಪದಾತಿಸೈನ್ಯದ ಎಲ್ಲಾ ಶ್ರೇಣಿಯ ಸಿಬ್ಬಂದಿ ಮತ್ತು ನಿವೃತ್ತರ ಅದಮ್ಯ ಚೈತನ್ಯ ಮತ್ತು ಧೈರ್ಯಕ್ಕೆ ವಂದಿಸುತ್ತೇವೆ. ನಮ್ಮ ರಾಷ್ಟ್ರದ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಪಡಿಸುತ್ತಾ ಯಾವುದೇ ಪ್ರತಿಕೂಲ ಸನ್ನಿವೇಶವನ್ನು ಎದುರಿಸಲು ಅವರು ಸದಾ ದೃಢವಾಗಿ ನಿಲ್ಲುವರು. ಪದಾತಿದಳವು ಶಕ್ತಿ, ಶೌರ್ಯ ಮತ್ತು ಕರ್ತವ್ಯದ ಸಾರವನ್ನು ಒಳಗೊಂಡಿದ್ದು ಎಲ್ಲಾ ಭಾರತೀಯರನ್ನೂ ಪ್ರೇರೇಪಿಸುತ್ತಿದೆ.”
*****
(ಪ್ರಕಟಣೆ ಐ.ಡಿ.: 2068760)
ವಿಸಿಟರ್ ಕೌಂಟರ್ : 92
ಪ್ರಕಟಣೆಯನ್ನು ಇದರಲ್ಲಿ ಓದಿ:
Odia
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam