ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆರ್ಯ ಸಮಾಜದ ಸ್ಮಾರಕಕ್ಕೆ ಪ್ರಧಾನಮಂತ್ರಿಯವರಿಂದ ಗೌರವ ನಮನ


ಇದು ಬಹಳ ವಿಶೇಷ ವರ್ಷ ಏಕೆಂದರೆ ನಾವು ಸ್ವಾಮಿ ದಯಾನಂದ ಸರಸ್ವತಿಯವರ 200ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ: ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 22 NOV 2024 3:09AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಗಯಾನಾದಲ್ಲಿ ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಗಯಾನಾ ಜನರ ಪ್ರಯತ್ನಗಳು ಮತ್ತು ಪಾತ್ರವನ್ನು ಶ್ರೀ ಮೋದಿಯವರು ಶ್ಲಾಘಿಸಿದರು. ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜಯಂತಿಯನ್ನು ನಾವು ಆಚರಿಸುತ್ತಿರುವುದರಿಂದ ಈ ವರ್ಷವು ಬಹಳ ವಿಶೇಷವಾಗಿದೆ ಎಂದು ಅವರು ಹೇಳಿದರು.

Xನ ಪೋಸ್ಟ್ ನಲ್ಲಿ, ಅವರು:

"ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದೇನೆ. ಗಯಾನಾದಲ್ಲಿ ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಅವರ ಪಾತ್ರ ನಿಜಕ್ಕೂ ಶ್ಲಾಘನೀಯ. ಇದು ಬಹಳ ವಿಶೇಷವಾದ ವರ್ಷ ಏಕೆಂದರೆ ನಾವು ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ" ಎಂದು ಬರೆದಿದ್ದಾರೆ.

 

 

*****


(ಪ್ರಕಟಣೆ ಐ.ಡಿ.: 2079029) ವಿಸಿಟರ್ ಕೌಂಟರ್ : 72