ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶಾಖಪಟ್ಟಣದ ಉಕ್ಕು ಸ್ಥಾವರಕ್ಕೆ ಆಂಧ್ರಪ್ರದೇಶದ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನವಿದೆ: ಪ್ರಧಾನಮಂತ್ರಿ

Posted On: 17 JAN 2025 5:54PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿಶಾಖಪಟ್ಟಣದ ಉಕ್ಕು ಸ್ಥಾವರವು ಆಂಧ್ರಪ್ರದೇಶದ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದು, ಅದು ಅವರ ಮನಸ್ಸನ್ನು ಗೆದ್ದಿದೆ ಎಂದು ಹೇಳಿದ್ದಾರೆ. "ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಶಾಖಪಟ್ಟಣಂ ಉಕ್ಕು ಸ್ಥಾವರಸ್ಥಾವರಕ್ಕೆ 10,000 ಕೋಟಿ ರೂ. ಗಿಂತ ಹೆಚ್ಚಿನ ಈಕ್ವಿಟಿ ಬೆಂಬಲವನ್ನು ನೀಡಲು ನಿರ್ಧರಿಸಲಾಯಿತು" ಎಂದು ಶ್ರೀ ಮೋದಿಯವರು ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ವಿಶಾಖಪಟ್ಟಣಂ ಉಕ್ಕು ಸ್ಥಾವರವು ಆಂಧ್ರಪ್ರದೇಶದ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದು, ಅದು ಅವರ ಮನಸ್ಸನ್ನು ಗೆದ್ದಿದೆ. ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ಸ್ಥಾವರಕ್ಕೆ 10,000 ಕೋಟಿ ರೂ.ಗಿಂತ ಹೆಚ್ಚಿನ ಈಕ್ವಿಟಿ ಬೆಂಬಲವನ್ನು ನೀಡಲು ನಿರ್ಧರಿಸಲಾಗಿದೆ. ಆತ್ಮನಿರ್ಭರ ಭಾರತವನ್ನು ನಿರ್ಮಿಸುವಲ್ಲಿ ಉಕ್ಕಿನ ಕ್ಷೇತ್ರದ ಮಹತ್ವವನ್ನು ಅರ್ಥಮಾಡಿಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ" ಎಂದು ಹೇಳಿದ್ದಾರೆ.

 

 

*****


(Release ID: 2094348)