ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಸಂಭವಿಸಿದ ರೈಲ್ವೆ ದುರಂತದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 22 JAN 2025 11:35PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಸಂಭವಿಸಿದ ರೈಲ್ವೆ ದುರಂತದಲ್ಲಿ ಆದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿಯವರ ಕಚೇರಿಯು ತನ್ನ X ಹ್ಯಾಂಡಲ್ ನ ಪೋಸ್ಟ್ ನಲ್ಲಿ:

"ಮಹಾರಾಷ್ಟ್ರದ ಜಲಗಾಂವ್ ನಲ್ಲಿ ರೈಲ್ವೆ ಹಳಿಗಳ ಮೇಲೆ ಸಂಭವಿಸಿದ ದುರಂತ ಅಪಘಾತದಿಂದ ದುಃಖಿತನಾಗಿದ್ದೇನೆ. ಜೀವ ಹಾನಿಯಾದ ಕುಟುಂಬಗಳಿಗೆ ನನ್ನ ಹೃದಯ ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸ್ಥಳೀಯ ಅಧಿಕಾರಿಗಳು ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತಿದ್ದಾರೆ: ಎಂದು ತಿಳಿಸಿದೆ. ಪ್ರಧಾನಮಂತ್ರಿ @narendramodi"

 

 

*****

 


(ಪ್ರಕಟಣೆ ಐ.ಡಿ.: 2095788) ವಿಸಿಟರ್ ಕೌಂಟರ್ : 66