ಪ್ರಧಾನ ಮಂತ್ರಿಯವರ ಕಛೇರಿ
ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಕೆ. ಎಂ. ಚೆರಿಯನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರಿಂದ ಸಂತಾಪ ಸೂಚನೆ
Posted On:
26 JAN 2025 3:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಖ್ಯಾತ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಕೆ. ಎಂ. ಚೆರಿಯನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಯವರ ಕಛೇರಿಯ X ಖಾತೆಯಲ್ಲಿ ಹೀಗೆ ಹಾಕಲಾಗಿದೆ:
"ನಮ್ಮ ದೇಶದ ಅತ್ಯಂತ ಪ್ರಖ್ಯಾತ ವೈದ್ಯರಲ್ಲಿ ಒಬ್ಬರಾದ ಡಾ. ಕೆ. ಎಂ. ಚೆರಿಯನ್ ಅವರ ನಿಧನದಿಂದ ಬಹಳ ನೋವಾಗಿದೆ. ಹೃದ್ರೋಗ ಶಾಸ್ತ್ರಕ್ಕೆ ಅವರ ಕೊಡುಗೆ ಸದಾ ಸ್ಮರಣೀಯ, ಅನೇಕ ಜೀವಗಳನ್ನು ಉಳಿಸಿರುವುದು ಮಾತ್ರವಲ್ಲದೇ ಭವಿಷ್ಯದ ವೈದ್ಯರಿಗೆ ಮಾರ್ಗದರ್ಶನ ನೀಡುತ್ತದೆ. ತಂತ್ರಜ್ಞಾನ ಮತ್ತು ನಾವೀನ್ಯತೆಗೆ ಅವರು ನೀಡಿದ ಪ್ರಾಮುಖ್ಯತೆ ಎದ್ದು ಕಾಣುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ನಾನಿರುತ್ತೇನೆ.
ಪಿಎಂ @narendramodi"
*****
(Release ID: 2096495)
Read this release in:
English
,
Urdu
,
Hindi
,
Marathi
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam