ಪ್ರಧಾನ ಮಂತ್ರಿಯವರ ಕಛೇರಿ
ರಾಮಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
12 FEB 2025 2:05PM by PIB Bengaluru
ಇಂದು ನಿಧನ ಹೊಂದಿದ ರಾಮಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಇಡೀ ಜೀವನವನ್ನು ಭಗವಾನ್ ಶ್ರೀರಾಮನ ಸೇವೆಗೆ ಮುಡಿಪಾಗಿಟ್ಟಿದ್ದ ಮಹಂತ್ ಅವರು ಧಾರ್ಮಿಕ ಆಚರಣೆಗಳು ಮತ್ತು ಧರ್ಮಗ್ರಂಥಗಳಲ್ಲಿ ಪರಿಣಿತರಾಗಿದ್ದರು ಎಂದು ಶ್ರೀ ಮೋದಿಯವರು ಸ್ಮರಿಸಿಕೊಂಡಿದ್ದಾರೆ.
ತಮ್ಮ ಎಕ್ಸ್ ಪೋಸ್ಟ್ ನಲ್ಲಿ;
“ಶ್ರೀರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕರಾದ ಮಹಂತ್ ಸತ್ಯೇಂದ್ರ ದಾಸ್ ಅವರ ನಿಧನ ವಾರ್ತೆ ಕೇಳಿ ತೀವ್ರ ದುಃಖವಾಗಿದೆ. ಧಾರ್ಮಿಕ ಆಚರಣೆಗಳು ಮತ್ತು ಧರ್ಮಗ್ರಂಥಗಳಲ್ಲಿ ಪಾರಂಗತರಾಗಿದ್ದ ಮಹಂತ್ ಅವರು ತಮ್ಮ ಇಡೀ ಜೀವನವನ್ನು ಭಗವಾನ್ ಶ್ರೀ ರಾಮನ ಸೇವೆಗೆ ಮುಡಿಪಾಗಿಟ್ಟಿದ್ದರು. ದೇಶದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಜೀವನಕ್ಕೆ ಅವರ ಅಮೂಲ್ಯ ಕೊಡುಗೆಯನ್ನು ಸದಾ ಭಕ್ತಿಯಿಂದ ಸ್ಮರಿಸಲಾಗುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಸ್ಥರು ಮತ್ತು ಅನುಯಾಯಿಗಳಿಗೆ ದೇವರು ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಓಂ ಶಾಂತಿ!” ಎಂದು ಬರೆದುಕೊಂಡಿದ್ದಾರೆ.
*****
(रिलीज़ आईडी: 2102314)
आगंतुक पटल : 44
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam