ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶಾಹಿದ್ ದಿವಸದ ಅಂಗವಾಗಿ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಕಟಣಾ ದಿನಾಂಕ: 23 MAR 2025 9:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಶಾಹಿದ್ ದಿವಸದ ಅಂಗವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರಿಗೆ ಗೌರವ ನಮನ ಸಲ್ಲಿಸಿ, ಅವರು ರಾಷ್ಟ್ರಕ್ಕಾಗಿ ಮಾಡಿರುವ ಅಪ್ರತಿಮ ತ್ಯಾಗವನ್ನು ಸ್ಮರಿಸಿದ್ದಾರೆ. 

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: 

“ಇಂದು, ನಮ್ಮ ರಾಷ್ಟ್ರವು ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರ ಅಪ್ರತಿಮ ತ್ಯಾಗವನ್ನು ಸ್ಮರಿಸುತ್ತಿದೆ. ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ಅವರ ನಿರ್ಭೀತ ಪ್ರಯತ್ನಗಳು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇರಲಿವೆ.”

 

 

*****


(ಪ್ರಕಟಣೆ ಐ.ಡಿ.: 2114136) ವಿಸಿಟರ್ ಕೌಂಟರ್ : 73