ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮ್ಯಾನ್ಮಾರ್‌ ಭೂಕಂಪದ ಹಿನ್ನೆಲೆಯಲ್ಲಿ  ಹಿರಿಯ ಸೇನಾ ಮುಖ್ಯಸ್ಥರಾದ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ

Posted On: 29 MAR 2025 1:41PM by PIB Bengaluru

ಮ್ಯಾನ್ಮಾರ್‌ನಲ್ಲಿ ಭೂಕಂಪದ ದುರಂತ ಸನ್ನಿವೇಶದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇನಾ ಮುಖ್ಯಸ್ಥರಾದ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸವಾಲಿನ ಸಮಯದಲ್ಲಿ ಮ್ಯಾನ್ಮಾರ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲಲು ಆಪ್ತ ಸ್ನೇಹಿತ ಮತ್ತು ನೆರೆಹೊರೆಯ ದೇಶವಾದ ಭಾರತದ ದೃಢವಾದ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. ಈ ವಿಪತ್ತಿಗೆ ಪ್ರತಿಕ್ರಿಯೆಯಾಗಿ, ಭಾರತ ಸರ್ಕಾರವು ಆಪರೇಷನ್ ಬ್ರಹ್ಮ ಪ್ರಾರಂಭಿಸಿದೆ, ಇದು ವಿಕೋಪದಿಂದ ಬಾಧಿತವಾಗಿರುವ ಪ್ರದೇಶಗಳಿಗೆ ತಕ್ಷಣದ ಪರಿಹಾರ ಮತ್ತು ಸಹಾಯವನ್ನು ಒದಗಿಸುವ ಉಪಕ್ರಮವಾಗಿದೆ.

ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ: 

“ಮ್ಯಾನ್ಮಾರ್‌ನ ಸೀನಿಯರ್ ಜನರಲ್ (ಸೇನಾ ಮುಖ್ಯಸ್ಥ) ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತನಾಡಿದೆ. ವಿನಾಶಕಾರಿ ಭೂಕಂಪದಲ್ಲಿ ಜೀವಹಾನಿಗೆ ತೀವ್ರ ಸಂತಾಪ ತಿಳಿಸಿದೆ. ಆಪ್ತ ಸ್ನೇಹಿತ ಮತ್ತು ನೆರೆಯ ರಾಷ್ಟ್ರವಾಗಿ, ಭಾರತವು ಈ ಸಂಕಷ್ಟದ ಸಮಯದಲ್ಲಿ ಮ್ಯಾನ್ಮಾರ್ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. #OperationBrahma ಉಪಕ್ರಮದ ಭಾಗವಾಗಿ ವಿಪತ್ತು ಪರಿಹಾರ ಸಾಮಗ್ರಿಗಳು, ಮಾನವೀಯ ನೆರವು, ಶೋಧ ಮತ್ತು ರಕ್ಷಣಾ ತಂಡಗಳನ್ನು ಭೂಕಂಪ ಬಾಧಿತ ಪ್ರದೇಶಗಳಿಗೆ ತ್ವರಿತವಾಗಿ ರವಾನಿಸಲಾಗುತ್ತಿದೆ.”

 

 

*****


(Release ID: 2116625) Visitor Counter : 41