ಪ್ರಧಾನ ಮಂತ್ರಿಯವರ ಕಛೇರಿ
ಶುಭ ಶುಕ್ರವಾರದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರಿಂದ ದಯೆ ಮತ್ತು ಸಹಾನುಭೂತಿಯ ಮೌಲ್ಯಗಳ ಬಗ್ಗೆ ಪ್ರಸ್ತಾಪ
Posted On:
18 APR 2025 9:42AM by PIB Bengaluru
ಶುಭ ಶುಕ್ರವಾರದ ಸಂಭ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೇಸು ಕ್ರಿಸ್ತನ ಮಹತ್ತರ ತ್ಯಾಗವನ್ನು ಸ್ಮರಿಸಿದ್ದಾರೆ. ನಮ್ಮ ಜೀವನದಲ್ಲಿ ದಯೆ, ಸಹಾನುಭೂತಿ ಮತ್ತು ಔದಾರ್ಯವನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಈ ದಿನ ನೆನಪಿಸುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"ಶುಭ ಶುಕ್ರವಾರದಂದು, ನಾವು ಯೇಸು ಕ್ರಿಸ್ತನ ತ್ಯಾಗವನ್ನು ಸ್ಮರಿಸುತ್ತೇವೆ. ಈ ದಿನವು ದಯೆ, ಸಹಾನುಭೂತಿ ಮತ್ತು ಸದಾಕಾಲ ಔದಾರ್ಯದಿಂದಿರಲು ನಮಗೆ ಸ್ಫೂರ್ತಿ ನೀಡುತ್ತದೆ. ಶಾಂತಿ ಮತ್ತು ಒಗ್ಗಟ್ಟಿನ ಮನೋಭಾವ ಸದಾ ಇರಲಿ."
*****
(Release ID: 2122706)
Read this release in:
Odia
,
English
,
Khasi
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam