ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶುಭ ಶುಕ್ರವಾರದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರಿಂದ ದಯೆ ಮತ್ತು ಸಹಾನುಭೂತಿಯ ಮೌಲ್ಯಗಳ ಬಗ್ಗೆ ಪ್ರಸ್ತಾಪ

Posted On: 18 APR 2025 9:42AM by PIB Bengaluru

ಶುಭ ಶುಕ್ರವಾರದ ಸಂಭ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೇಸು ಕ್ರಿಸ್ತನ ಮಹತ್ತರ ತ್ಯಾಗವನ್ನು ಸ್ಮರಿಸಿದ್ದಾರೆ. ನಮ್ಮ ಜೀವನದಲ್ಲಿ ದಯೆ, ಸಹಾನುಭೂತಿ ಮತ್ತು ಔದಾರ್ಯವನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಈ ದಿನ ನೆನಪಿಸುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: 

"ಶುಭ ಶುಕ್ರವಾರದಂದು, ನಾವು ಯೇಸು ಕ್ರಿಸ್ತನ ತ್ಯಾಗವನ್ನು ಸ್ಮರಿಸುತ್ತೇವೆ. ಈ ದಿನವು ದಯೆ, ಸಹಾನುಭೂತಿ ಮತ್ತು ಸದಾಕಾಲ ಔದಾರ್ಯದಿಂದಿರಲು ನಮಗೆ ಸ್ಫೂರ್ತಿ ನೀಡುತ್ತದೆ. ಶಾಂತಿ ಮತ್ತು ಒಗ್ಗಟ್ಟಿನ ಮನೋಭಾವ ಸದಾ ಇರಲಿ."

 

 

*****


(Release ID: 2122706)