ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವ ಪರಿಸರ ದಿನದಂದು ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ಅವರು ಸಿಂದೂರ ಸಸಿ ನೆಟ್ಟರು

Posted On: 05 JUN 2025 11:48AM by PIB Bengaluru

ವಿಶ್ವ ಪರಿಸರ ದಿನದಂದು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಕುಂಕುಮದ (ಸಿಂದೂರ) ಸಸಿ ನೆಟ್ಟರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಅಸಾಧಾರಣ ಧೈರ್ಯ ಮತ್ತು ದೇಶಭಕ್ತಿಯನ್ನು ಪ್ರದರ್ಶಿಸಿದ ಗುಜರಾತಿನ ಕಚ್ ನ ಧೈರ್ಯಶಾಲಿ ತಾಯಂದಿರು ಮತ್ತು ಸಹೋದರಿಯರು ಈ ಸಸಿಯನ್ನು ಅವರಿಗೆ ಉಡುಗೊರೆಯಾಗಿ ನೀಡಿದ್ದರು.

ಗುಜರಾತ್ ಗೆ ತಮ್ಮ ಇತ್ತೀಚಿನ ಭೇಟಿಯನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಕುಂಕುಮ (ಸಿಂದೂರ) ಸಸ್ಯದ ಉಡುಗೊರೆ ನಮ್ಮ ದೇಶದ ಮಹಿಳಾ ಶಕ್ತಿಯ ಶೌರ್ಯ ಮತ್ತು ಸ್ಫೂರ್ತಿಯ ಬಲವಾದ ಸಂಕೇತವಾಗಿ ಉಳಿಯುತ್ತದೆ ಎಂದು ಹೇಳಿದರು.

ಎಕ್ಸ್ ನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಮೋದಿಯವರು ಹೀಗೆ ಹೇಳಿದರು;

"1971ರ ಯುದ್ಧದಲ್ಲಿ ಧೈರ್ಯ ಮತ್ತು ಶೌರ್ಯಕ್ಕೆ ಅದ್ಭುತ ಉದಾಹರಣೆ ನೀಡಿದ ಕಚ್ ನ ಧೈರ್ಯಶಾಲಿ ತಾಯಂದಿರು ಮತ್ತು ಸಹೋದರಿಯರು ಇತ್ತೀಚೆಗೆ ಗುಜರಾತ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ನನಗೆ ಸಿಂದೂರ ಗಿಡವನ್ನು ಉಡುಗೊರೆಯಾಗಿ ನೀಡಿದರು. ಇಂದು, ವಿಶ್ವ ಪರಿಸರ ದಿನದಂದು, ನವದೆಹಲಿಯಲ್ಲಿರುವ ಪ್ರಧಾನಮಂತ್ರಿ ನಿವಾಸದಲ್ಲಿ ಆ ಗಿಡವನ್ನು ನೆಡುವ ಸೌಭಾಗ್ಯ ನನಗೆ ಸಿಕ್ಕಿದೆ. ಈ ಗಿಡ ನಮ್ಮ ದೇಶದ ಮಹಿಳಾ ಶಕ್ತಿಯ ಶೌರ್ಯ ಮತ್ತು ಸ್ಫೂರ್ತಿಯ ಬಲವಾದ ಸಂಕೇತವಾಗಿ ಉಳಿಯುತ್ತದೆ."

 

 

*****


(Release ID: 2134164)