ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿವಿಧ ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ವಿವಿಧ ನಿಯೋಗಗಳ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಭಯೋತ್ಪಾದನೆ ವಿರುದ್ಧ ಭಾರತದ ನಿಲುವನ್ನು ಎತ್ತಿಹಿಡಿದಿದ್ದಕ್ಕಾಗಿ ನಿಯೋಗಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

Posted On: 10 JUN 2025 9:25PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ವಿವಿಧ ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ವಿವಿಧ ನಿಯೋಗಗಳ ಸದಸ್ಯರನ್ನು ಭೇಟಿ ಮಾಡಿದರು. ಈ ಪ್ರತಿನಿಧಿಗಳು ಶಾಂತಿಗಾಗಿ ಭಾರತದ ಬದ್ಧತೆಯನ್ನು ಮತ್ತು ಭಯೋತ್ಪಾದನೆಯ ಪಿಡುಗನ್ನು ನಿರ್ಮೂಲನೆ ಮಾಡುವ ಅಗತ್ಯವನ್ನು ವಿವರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಜಾಗತಿಕ ವೇದಿಕೆಗಳಲ್ಲಿ ಭಾರತದ ಧ್ವನಿಯನ್ನು ಮುನ್ನಡೆಸುವಲ್ಲಿ ನಿಯೋಗಗಳ ಸಮರ್ಪಣೆಯನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.

ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ನಲ್ಲಿ, ಅವರು ಹೀಗೆ ಬರೆದಿದ್ದಾರೆ:

‘‘ವಿವಿಧ ದೇಶಗಳಲ್ಲಿಭಾರತವನ್ನು ಪ್ರತಿನಿಧಿಸಿದ ವಿವಿಧ ನಿಯೋಗಗಳ ಸದಸ್ಯರನ್ನು ಭೇಟಿಯಾದೆ ಮತ್ತು ನಿಯೋಗಗಳು ಶಾಂತಿಗೆ ಭಾರತದ ಬದ್ಧತೆ ಮತ್ತು ಭಯೋತ್ಪಾದನೆಯ ಪಿಡುಗನ್ನು ನಿರ್ಮೂಲನೆ ಮಾಡುವ ಅಗತ್ಯವನ್ನು ವಿವರಿಸಿವೆ. ಅವರು ಭಾರತದ ಧ್ವನಿಯನ್ನು ಮಂಡಿಸಿದ ರೀತಿ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ ಇದೆ,’’ ಎಂದಿದ್ದಾರೆ.

 

 

*****


(Release ID: 2135575)