ಪ್ರಧಾನ ಮಂತ್ರಿಯವರ ಕಛೇರಿ
ಈ ಪ್ರದೇಶದಲ್ಲಿ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಇಸ್ರೇಲ್ ಪ್ರಧಾನಿ ಪ್ರಧಾನಮಂತ್ರಿಯವರೊಂದಿಗೆ ಸಂಭಾಷಣೆ ನಡೆಸಿದರು
Posted On:
13 JUN 2025 7:42PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಈ ಪ್ರದೇಶದಲ್ಲಿ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಮಾತನಾಡಿದರು.
ಚರ್ಚೆಯ ಸಮಯದಲ್ಲಿ, ಪ್ರಧಾನಮಂತ್ರಿ ನೆತನ್ಯಾಹು ಅವರು ಶ್ರೀ ನರೇಂದ್ರ ಮೋದಿ ಅವರಿಗೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರಿಸಿದರು, ಆದರೆ ಭಾರತದ ಪ್ರಧಾನಿ ಪರಿಸ್ಥಿತಿಯ ಬಗ್ಗೆ ಭಾರತದ ಕಳವಳವನ್ನು ತಿಳಿಸಿದರು. ಈ ವಲಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಮರುಸ್ಥಾಪಿಸುವ ತುರ್ತು ಅಗತ್ಯವನ್ನು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು, ಜಾಗತಿಕ ಶಾಂತಿ ಪ್ರಯತ್ನಗಳಿಗೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.
ಈ ಸಂಬಂಧ ಅವರು ಎಕ್ಸ್ ಖಾತೆಯಲ್ಲಿನ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
"ಇಸ್ರೇಲ್ ಪ್ರಧಾನಮಂತ್ರಿ @netanyahu ಅವರಿಂದ ದೂರವಾಣಿ ಕರೆ ಬಂದಿದೆ. ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಅವರು ನನಗೆ ವಿವರಿಸಿದರು. ನಾನು ಭಾರತದ ಕಳವಳಗಳನ್ನು ಹಂಚಿಕೊಂಡಿದ್ದೇನೆ ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳಿದೆ,’’ ಎಂದಿದ್ದಾರೆ.
*****
(Release ID: 2136413)
Read this release in:
Assamese
,
Odia
,
English
,
Urdu
,
Marathi
,
Hindi
,
Bengali
,
Punjabi
,
Gujarati
,
Tamil
,
Telugu
,
Malayalam