ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಸಂಭಾಲ್ ನ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ
Posted On:
05 JUL 2025 10:17AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಸಂಭಾಲ್ ನ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಪ್ರಧಾನಿಯವರು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ:
"ಉತ್ತರ ಪ್ರದೇಶದ ಸಂಭಾಲ್ ನ ಅಪಘಾತದಲ್ಲಿ ಆದ ಜೀವಹಾನಿಯ ಬಗ್ಗೆ ತೀವ್ರ ದುಃಖವಾಗಿದೆ. ಈ ದುರ್ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೆನೆ.
ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ: ಪ್ರಧಾನಮಂತ್ರಿ @narendramodi" ಎಂದು ಹೇಳಿದೆ.
*****
(Release ID: 2142437)
Read this release in:
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam