ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಮ್ ವಿಲಾಸ್ ಪಾಸ್ವಾನ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು

Posted On: 05 JUL 2025 8:00PM by PIB Bengaluru

ಕೇಂದ್ರ ಸರ್ಕಾರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜಯಂತಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಸಮಾಜದ ದೀನದಲಿತರು, ಹಿಂದುಳಿದ ವರ್ಗಗಳು ಮತ್ತು ಸವಲತ್ತುಗಳ ವಂಚಿತರ ಹಕ್ಕುಗಳಿಗೆ ರಾಮ್ ವಿಲಾಸ್ ಪಾಸ್ವಾನ್ ಅವರ ಹೋರಾಟವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನ ಮಂತ್ರಿಗಳು ಸ್ಮರಿಸಿದ್ದಾರೆ. 

ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನ ಮಂತ್ರಿಗಳು:

"ಕೇಂದ್ರ ಸರ್ಕಾರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ವಿನಮ್ರ ನಮನಗಳು. ಅವರ ಇಡೀ ಜೀವನ ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾಗಿತ್ತು. ದಲಿತರು, ಹಿಂದುಳಿದವರು ಮತ್ತು ವಂಚಿತರ ಹಕ್ಕುಗಳಿಗಾಗಿ ಅವರ ಹೋರಾಟವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ'' ಎಂದು ಬರೆದುಕೊಂಡಿದ್ದಾರೆ.

 

 

*****

 


(Release ID: 2142825)