ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಅಭ್ಯರ್ಥಿಯಾಗಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರ ನಾಮನಿರ್ದೇಶನ - ಪ್ರಧಾನಮಂತ್ರಿ ಸ್ವಾಗತ

Posted On: 17 AUG 2025 8:54PM by PIB Bengaluru

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಶ್ರೀ. ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌.ಡಿ.ಎ)ದ ನಿರ್ಧಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಗತಿಸಿದ್ದಾರೆ.

ಎಕ್ಸ್ ನ ಥ್ರೆಡ್ ಪೋಸ್ಟ್‌ ನಲ್ಲಿ ಅವರು ಹೀಗೆ ಬರೆದಿದ್ದಾರೆ:

"ಶ್ರೀ ಸಿ.ಪಿ ರಾಧಾಕೃಷ್ಣನ್ ಅವರು ತಮ್ಮ ದೀರ್ಘಾವಧಿ ಸಾರ್ವಜನಿಕ ಜೀವನದಲ್ಲಿ ಸಮರ್ಪಣೆ, ವಿನಮ್ರತೆ ಮತ್ತು ಜಾಣ್ಮೆಯಿಂದ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಅವರು ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದು, ಸದಾ ಸಮುದಾಯ ಸೇವೆ ಮತ್ತು ದುರ್ಬಲ ವರ್ಗದವರ ಸಬಲೀಕರಣದತ್ತ ಗಮನಹರಿಸಿದ್ದಾರೆ. ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ಅವರು ಅಪಾರವಾಗಿ ಕೆಲಸ ಮಾಡಿದ್ದಾರೆ. ಎನ್‌.ಡಿ.ಎ ಕುಟುಂಬವು ಅವರನ್ನು ನಮ್ಮ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲು ನಿರ್ಧರಿಸಿರುವುದು ನನಗೆ ಸಂತಸ ತಂದಿದೆ."

"ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಸಂಸದರಾಗಿ ಮತ್ತು ವಿವಿಧ ರಾಜ್ಯಗಳ ರಾಜ್ಯಪಾಲರಾಗಿ ಅಪಾರ ಅನುಭವ ಹೊಂದಿದ್ದಾರೆ. ಅವರು ಸಂಸದೀಯ ಕಾರ್ಯಚಟುವಟಿಕೆಗಳಲ್ಲಿ ಸ್ಪಷ್ಟ ತಿಳುವಳಿಕೆ ಮತ್ತು ನಿರ್ಧಾರ ಹೊಂದಿದ್ದರು. ಅವರು ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿ, ಸಾಮಾನ್ಯ ನಾಗರಿಕರು ಎದುರಿಸುವ ಸವಾಲುಗಳನ್ನು ಪರಿಹರಿಸುವತ್ತ ಗಮನಹರಿಸಿದ್ದರು. ಶಾಸಕಾಂಗ ಮತ್ತು ಸಾಂವಿಧಾನಿಕ ವಿಷಯಗಳ ಬಗ್ಗೆ ಅಪಾರ ಜ್ಞಾನ ಹೊಂದುವುದನ್ನು ಈ ಅನುಭವಗಳು ಅವರಿಗೆ ಖಚಿತಪಡಿಸಿದ್ದವು. ಅವರು ಪ್ರೇರಣಾದಾಯಕ ಉಪರಾಷ್ಟ್ರಪತಿಗಳಾಗುವರು ಎಂದು ನನಗೆ ವಿಶ್ವಾಸವಿದೆ."

 

“திரு. சி.பி. ராதாகிருஷ்ணன் அவர்கள், தனது அர்ப்பணிப்பு, பணிவு மற்றும் அறிவுத்திறனால் பொது வாழ்வில் நீண்ட காலம் தன்னை வேறுபடுத்திக் காட்டியுள்ளார். தாம் வகித்த பல்வேறு பதவிகளின் போது, சமூக சேவை மற்றும் விளிம்புநிலை மக்களுக்கு அதிகாரம் அளிப்பதில் அவர் எப்போதும் கவனம் செலுத்தியுள்ளார். தமிழ்நாட்டில்  அடிமட்ட  நிலையில் அவர் விரிவான பணிகளை மேற்கொண்டுள்ளார். எங்கள் கூட்டணியின் குடியரசு துணைத் தலைவர் வேட்பாளராக அவரை பரிந்துரைக்க தேசிய ஜனநாயகக் கூட்டணி குடும்பம் முடிவு செய்ததில் நான் மகிழ்ச்சியடைகிறேன்.

@CPRGuv”

“நாடாளுமன்ற உறுப்பினராகவும், பல்வேறு மாநிலங்களின் ஆளுநராகவும் திரு சி.பி. ராதாகிருஷ்ணன் அவர்கள் சிறந்த அனுபவத்தைக் கொண்டிருக்கிறார். அவரது நாடாளுமன்ற குறுக்கீடுகள் எப்போதுமே கூர்மையாக இருந்துள்ளன. ஆளுநராக அவர் பதவி வகித்த போது, சாமானிய மக்கள் சந்திக்கும் சவால்களுக்குத் தீர்வு காண்பதில் கவனம் செலுத்தினார். சட்டமன்ற மற்றும் அரசியலமைப்பு சார்ந்த விஷயங்களில் அவருக்கு ஆழ்ந்த ஞானம் இருப்பதை இந்த அனுபவங்கள் உறுதி செய்தன. குடியரசு துணைத் தலைவராக அவர் அனைவருக்கும் ஊக்கம் அளிப்பார்  என்று நான் நம்புகிறேன்”

 

 

*****

 


(Release ID: 2157343)