ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಪ್ರವಾಹ ಮತ್ತು ಭೂಕುಸಿತದಿಂದ ಉಂಟಾದ ಪರಿಸ್ಥಿತಿಯನ್ನು ಪರಿಶೀಲಿಸಲು ಹಿಮಾಚಲ ಪ್ರದೇಶ್ ಮತ್ತು ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ

ಪ್ರಕಟಣಾ ದಿನಾಂಕ: 09 SEP 2025 10:45AM by PIB Bengaluru

ಪ್ರವಾಹ ಮತ್ತು ಭೂಕುಸಿತದಿಂದ ಉಂಟಾದ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶ್ ಮತ್ತು ಪಂಜಾಬ್ ಗೆ ಭೇಟಿ ನೀಡಿದ್ದಾರೆ. ಪರಿಹಾರ ಮತ್ತು ಪುನರ್ವಸತಿಗೆ ಭಾರತ ಸರ್ಕಾರದ ಬದ್ಧತೆಯನ್ನು ಅವರು ಪುನಃ ದೃಡಪಡಿಸಿದರು.

ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯ ಪೋಸ್ಟ್ ಮೂಲಕ ಹೀಗೆ ಹೇಳಿದ್ದಾರೆ:

"ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ಹಿಮಾಚಲ ಪ್ರದೇಶ್ ಮತ್ತು ಪಂಜಾಬ್ ಗೆ ಭೇಟಿ ನೀಡಲಿದ್ದೇನೆ. ಈ ದುರಂತದ ಸಮಯದಲ್ಲಿ ಸಂತ್ರಸ್ಥರಿಗೆ ಭಾರತ ಸರ್ಕಾರ ಸದಾ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ".

****


(ಪ್ರಕಟಣೆ ಐ.ಡಿ.: 2164853) ವಿಸಿಟರ್ ಕೌಂಟರ್ : 28