ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2025ರ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

Posted On: 09 SEP 2025 8:23PM by PIB Bengaluru

ಪ್ರಧಾನಮಂತ್ರಿ ಅವರು ಇಂದು 2025ರ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಅವರು ಬರೆದಿದ್ದಾರೆ: 

“2025ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆಗಳು. ಅವರ ಜೀವನವು ಯಾವಾಗಲೂ ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ಬಡವರು ಹಾಗೂ ಅಂಚಿನಲ್ಲಿರುವವರ ಸಬಲೀಕರಣಕ್ಕೆ ಮೀಸಲಿಟ್ಟಿದೆ. ಅವರು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಮತ್ತು ಸಂಸದೀಯ ಚರ್ಚೆಯನ್ನು ಹೆಚ್ಚಿಸುವ ಅತ್ಯುತ್ತಮ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ.

@CPRGuv”

 

 

*****


(Release ID: 2165099) Visitor Counter : 2