ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಡೆಹ್ರಾಡೂನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ, ಉತ್ತರಾಖಂಡದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಪರಿಶೀಲನಾ ಸಭೆ ನಡೆಸಿದರು


ಉತ್ತರಾಖಂಡದಲ್ಲಿ ಪ್ರವಾಹ ಮತ್ತು ಮಳೆ ಪೀಡಿತ ಪ್ರದೇಶಗಳಿಗೆ 1200 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಪ್ರಧಾನಮಂತ್ರಿ

ಮೃತರ ಕುಟುಂಬಗಳಿಗೆ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಅನಾಥರಾದ ಮಕ್ಕಳಿಗೆ ಮಕ್ಕಳಿಗಾಗಿ ಪಿ.ಎಂ. ಕೇರ್ಸ್‌ ಯೋಜನೆಯಡಿ ಸಮಗ್ರ ಬೆಂಬಲವನ್ನು ಘೋಷಿಸಿದ ಪ್ರಧಾನಮಂತ್ರಿ

ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

ಎನ್‌.ಡಿ.ಆರ್‌.ಎಫ್‌, ಎಸ್‌.ಡಿ.ಆರ್‌.ಎಫ್‌ ಮತ್ತು ಆಪದಾ ಮಿತ್ರ ಸ್ವಯಂಸೇವಕರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ಸಂತ್ರಸ್ತ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಪುನಃಸ್ಥಾಪನೆ ಮತ್ತು ಪುನರ್‌ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲದ ಭರವಸೆ ನೀಡಿದೆ

Posted On: 11 SEP 2025 5:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್‌ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.

ಪ್ರಧಾನಮಂತ್ರಿ ಅವರು ಡೆಹ್ರಾಡೂನ್‌ನಲ್ಲಿ ಕೈಗೊಂಡ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪರಿಶೀಲಿಸಲು ಮತ್ತು ಉತ್ತರಾಖಂಡದಲ್ಲಿ ಸಂಭವಿಸಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಅಧಿಕೃತ ಸಭೆ ನಡೆಸಿದರು. ಉತ್ತರಾಖಂಡಕ್ಕೆ 1200 ಕೋಟಿ ರೂ.ಗಳ ಆರ್ಥಿಕ ನೆರವು ಘೋಷಿಸಿದರು.

ಇಡೀ ಪ್ರದೇಶ ಮತ್ತು ಜನರು ಚೇತರಿಸಿಕೊಳ್ಳಲು ಸಹಾಯ ಮಾಡಲು ಬಹು ಆಯಾಮದ ವಿಧಾನದ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು. ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಮನೆಗಳನ್ನು ಪುನರ್ನಿರ್ಮಿಸುವುದು, ರಾಷ್ಟ್ರೀಯ ಹೆದ್ದಾರಿಗಳ ಪುನರ್‌ನಿರ್ಮಾಣ, ಶಾಲೆಗಳ ಪುನರ್‌ ನಿರ್ಮಾಣ, ಪಿ.ಎಂ.ಎನ್‌.ಆರ್‌.ಎಫ್‌ ಮೂಲಕ ಪರಿಹಾರ ಒದಗಿಸುವುದು ಮತ್ತು ಜಾನುವಾರುಗಳಿಗೆ ಮಿನಿ ಕಿಟ್‌ಗಳನ್ನು ವಿತರಿಸುವಂತಹ ಕ್ರಮಗಳು ಇದರಲ್ಲಿ ಸೇರಿವೆ.

ಪ್ರಧಾನ ಮಂತ್ರಿ ಆವಾಸ್‌ ಯೋಜನೆ - ಗ್ರಾಮೀಣ ಅಡಿಯಲ್ಲಿ, ಪ್ರವಾಹದಿಂದ ಹಾನಿಗೊಳಗಾದ ಅರ್ಹ ಕುಟುಂಬಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳನ್ನು ಪುನರ್‌ನಿರ್ಮಿಸಲು ಉತ್ತರಾಖಂಡ ಸರ್ಕಾರ ಸಲ್ಲಿಸಿದ ವಿಶೇಷ ಯೋಜನೆ ಅಡಿಯಲ್ಲಿ ಹಣಕಾಸಿನ ನೆರವು ನೀಡಲಾಗುವುದು.

ಹಾನಿಯ ಪ್ರಮಾಣವನ್ನು ನಿರ್ಣಯಿಸಲು ರಾಜ್ಯಗಳಿಗೆ ಭೇಟಿ ನೀಡಲು ಕೇಂದ್ರ ಸರ್ಕಾರವು ಈಗಾಗಲೇ ಅಂತರ-ಸಚಿವಾಲಯ ಕೇಂದ್ರ ತಂಡಗಳನ್ನು ಉತ್ತರಾಖಂಡಕ್ಕೆ ಕಳುಹಿಸಿದೆ ಮತ್ತು ಅವರ ವಿವರವಾದ ವರದಿಯ ಆಧಾರದ ಮೇಲೆ ಹೆಚ್ಚಿನ ಸಹಾಯವನ್ನು ಪರಿಗಣಿಸಲಾಗುವುದು.

ನೈಸರ್ಗಿಕ ವಿಕೋಪದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ, ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ಹೇಳಿದರು.

ಭೂಕುಸಿತ ಮತ್ತು ಪ್ರವಾಹ ಸೇರಿದಂತೆ ಇತ್ತೀಚಿನ ನೈಸರ್ಗಿಕ ವಿಕೋಪಗಳಿಂದ ಬಾಧಿತರಾದ ಉತ್ತರಾಖಂಡದ ಕುಟುಂಬಗಳನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು. ನೊಂದ ಎಲ್ಲರಿಗೂ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ ಅವರು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದರು.

ಪ್ರವಾಹ ಮತ್ತು ಸಂಬಂಧಿತ ವಿಪತ್ತುಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ  ರೂ., ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ಘೋಷಿಸಿದ್ದಾರೆ.

ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಅನಾಥರಾದ ಮಕ್ಕಳು ಮಕ್ಕಳಿಗಾಗಿ ಪಿ.ಎಂ. ಕೇರ್ಸ್‌ ಯೋಜನೆಯ ಮೂಲಕ ನೆರವು ಪಡೆಯಲಿದ್ದಾರೆ ಮತ್ತು ಅವರ ದೀರ್ಘಕಾಲೀನ ಆರೈಕೆ ಮತ್ತು ಕಲ್ಯಾಣವನ್ನು ಖಾತ್ರಿಪಡಿಸುತ್ತಾರೆ ಎಂದು ಪ್ರಧಾನಮಂತ್ರಿ ಘೋಷಿಸಿದರು.

ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ನಿಯಮಗಳ ವ್ಯಾಪ್ತಿಯಲ್ಲಿ ರಾಜ್ಯಗಳಿಗೆ ಮುಂಗಡ ವಿತರಣೆ ಸೇರಿದಂತೆ ಈ ಹಂತದಲ್ಲಿ ಘೋಷಿಸಲಾಗುತ್ತಿರುವ ನೆರವು ಮಧ್ಯಂತರ ಅವಧಿಗೆ ಎಂದು ಪ್ರಧಾನಮಂತ್ರಿ ಹೇಳಿದರು. ರಾಜ್ಯದ ಜ್ಞಾಪಕ ಪತ್ರ ಮತ್ತು ಕೇಂದ್ರ ತಂಡಗಳ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರವು ಮೌಲ್ಯಮಾಪನವನ್ನು ಮತ್ತಷ್ಟು ಪರಿಶೀಲಿಸುತ್ತದೆ. ತಕ್ಷಣದ ಪರಿಹಾರ ಮತ್ತು ಸ್ಪಂದನೆಗಾಗಿ ಪ್ರಯತ್ನಗಳನ್ನು ಮಾಡಿದ ಎನ್‌.ಡಿ.ಆರ್‌.ಎಫ್‌, ಎಸ್‌.ಡಿ.ಆರ್‌.ಎಫ್‌, ಸೇನೆ, ರಾಜ್ಯ ಆಡಳಿತ ಮತ್ತು ಇತರ ಸೇವಾ ಆಧಾರಿತ ಸಂಸ್ಥೆಗಳ ಸಿಬ್ಬಂದಿಯ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.

ಪರಿಸ್ಥಿತಿಯ ಗಂಭೀರತೆಯನ್ನು ಒಪ್ಪಿಕೊಂಡ ಪ್ರಧಾನಮಂತ್ರಿ ಅವರು, ಪರಿಸ್ಥಿತಿಯನ್ನು ಪರಿಹರಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ ಎಂದು ಭರವಸೆ ನೀಡಿದರು.

 

*****
 


(Release ID: 2165858) Visitor Counter : 2