ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿಂದೂ ಮಹಾಸಾಗರ ಪ್ರದೇಶವನ್ನು ಸಮುದ್ರ ಮತ್ತು ವಾಯು ಸಂಪರ್ಕದ ಪ್ರಮುಖ ಕೇಂದ್ರವಾಗಿ ಪರಿವರ್ತಿಸುವ ಗ್ರೇಟ್ ನಿಕೋಬಾರ್ ದ್ವೀಪ ಯೋಜನೆಯ ಕುರಿತ ಲೇಖನ ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 12 SEP 2025 1:02PM by PIB Bengaluru

ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರ ಮತ್ತು ವಾಯು ಸಂಪರ್ಕದ ಪ್ರಮುಖ ಕೇಂದ್ರವಾಗಿ ಪರಿವರ್ತಿಸುವ ಗ್ರೇಟ್ ನಿಕೋಬಾರ್ ದ್ವೀಪ ಯೋಜನೆಯ ಕಾರ್ಯತಂತ್ರ, ರಕ್ಷಣಾ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯನ್ನು ವಿವರಿಸುವ ಲೇಖನವನ್ನು ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿಯವರು ಇಂದು ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ಭೂಪೇಂದರ್ ಯಾದವ್ ಅವರ ಎಕ್ಸ್ ಖಾತೆಯ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ; 

"ಕಾರ್ಯತಂತ್ರ, ರಕ್ಷಣಾ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯನ್ನು ಹೊಂದಿರುವ ಗ್ರೇಟ್ ನಿಕೋಬಾರ್ ದ್ವೀಪ ಯೋಜನೆಯು ಈ ಪ್ರದೇಶವನ್ನು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರ ಮತ್ತು ವಾಯು ಸಂಪರ್ಕದ ಪ್ರಮುಖ ಕೇಂದ್ರವಾಗಿ ಪರಿವರ್ತಿಸುತ್ತದೆ ಎಂದು ಕೇಂದ್ರ ಸಚಿವರಾದ ಶ್ರೀ @byadavbjp ಅವರು ಲೇಖನ ಮೂಲಕ ವಿವರಿಸಿದ್ದಾರೆ. ಆರ್ಥಿಕತೆ ಮತ್ತು ಪರಿಸರ ವಿಜ್ಞಾನವು ಪರಸ್ಪರ ಪೂರಕವಾಗಿರುವುದಕ್ಕೆ ಇದು ಒಂದು ಉತ್ತಮ ಉದಾಹರಣೆಯಾಗಿದೆ" ಎಂದು ಹೇಳಿದ್ದಾರೆ.
 

 

*****


(रिलीज़ आईडी: 2166003) आगंतुक पटल : 23
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Manipuri , Punjabi , Gujarati , Odia , Tamil , Telugu , Malayalam