ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಸಿಕಾರ್‌ ನಲ್ಲಿ ನಡೆದ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಪಿ.ಎಂ.ಎನ್.ಆರ್.ಎಫ್ ನಿಂದ ಪರಿಹಾರ ಘೋಷಣೆ

Posted On: 29 OCT 2024 7:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಅವಘಡದಲ್ಲಿ ಮೃತಪಟ್ಟ ಕುಟುಂಬದವರಿಗೆ ಪಿಎಂಎನ್ ಆರ್ ಎಫ್‌ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು  ಮತ್ತು ಗಾಯಗೊಂಡವರಿಗೆ ತಲಾ 50,000 ಸಾವಿರ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ ಸಾಮಾಜಿಕ ಮಾಧ್ಯಮ ಖಾತೆ  ಎಕ್ಸ್ ನಲ್ಲಿ ಹೀಗೆ ಹೇಳಿದೆ:

“ರಾಜಸ್ಥಾನದ ಸಿಕಾರ್‌ನಲ್ಲಿ ನಡೆದ ಬಸ್ ಅಪಘಾತ ಹೃದಯವಿದ್ರಾವಕ. ಮೃತಪಟ್ಟವರ  ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ದೇವರು ಅವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ @narendramodi

 

 

ಅಲ್ಲದೆ, ಪ್ರಧಾನಮಂತ್ರಿ ಅವರು ರಾಜಸ್ಥಾನದ ಸಿಕರ್ ನಲ್ಲಿ ನಡೆದ ಅವಘಡದಲ್ಲಿ ಮೃತಪಟ್ಟ ಕುಟುಂಬದವರಿಗೆ ಪಿಎಂಎನ್ ಆರ್ ಎಫ್‌ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.  ಗಾಯಗೊಂಡವರಿಗೆ ತಲಾ 50,000 ಸಾವಿರ ರೂ. ಪರಿಹಾರ ನೀಡಲಾಗುವುದು’’

****


(Release ID: 2177151) Visitor Counter : 12