ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಂಗಲ್ ಮುಂಡಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 29 NOV 2024 11:27AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿರ್ಸಾ ಮುಂಡಾ ಅವರ ವಂಶಸ್ಥ ಮಂಗಲ್ ಮುಂಡಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

"ಭಗವಾನ್ ಬಿರ್ಸಾ ಮುಂಡಾ ಅವರ ವಂಶಸ್ಥರಾದ ಮಂಗಲ್ ಮುಂಡಾ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರ ನಿಧನವು ಅವರ ಕುಟುಂಬಕ್ಕೆ ಮಾತ್ರವಲ್ಲದೆ ಜಾರ್ಖಂಡ್‌ನ ಬುಡಕಟ್ಟು ಸಮುದಾಯಕ್ಕೂ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ಶಕ್ತಿ ನೀಡಲಿ. ಓಂ ಶಾಂತಿ!"

 

****


(Release ID: 2178763) Visitor Counter : 15