ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪರಂಪರೆಯನ್ನು ಗೌರವಿಸಲು ಅಕ್ಟೋಬರ್ 31 ರಂದು ನಡೆಯುವ ಏಕತಾ ಓಟದಲ್ಲಿ ನಾಗರಿಕರು ಭಾಗವಹಿಸಲು ಪ್ರಧಾನಮಂತ್ರಿ ಮನವಿ

प्रविष्टि तिथि: 27 OCT 2025 9:15AM by PIB Bengaluru

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಅಕ್ಟೋಬರ್ 31 ರಂದು ನಡೆಯುವ ಏಕತಾ ಓಟದಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ದೇಶಾದ್ಯಂತ ನಾಗರಿಕರಿಗೆ ಕರೆ ನೀಡಿದ್ದಾರೆ. ಈ ಕಾರ್ಯಕ್ರಮವು ರಾಷ್ಟ್ರೀಯ ಏಕತಾ ದಿನವನ್ನು ಸೂಚಿಸುತ್ತದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಭಾರತಕ್ಕಾಗಿ ಕಲ್ಪಿಸಿಕೊಂಡ ಏಕತೆ ಮತ್ತು ಒಗ್ಗಟ್ಟಿನ ಶಾಶ್ವತ ಮನೋಭಾವವನ್ನು ಆಚರಿಸುವ ಸಂಕೇತವಾಗಿದೆ.

ಏಕತಾ ದಿವಸ್ ಭಾರತ್ದ ಎಕ್ಸ್ ಖಾತೆಯ ಪೋಸ್ಟ್‌ಗೆ ಶ್ರೀ ಮೋದಿ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ:

“ಅಕ್ಟೋಬರ್ 31 ರಂದು ನಡೆಯುವ ಏಕತಾ ದಿನದ ಓಟದಲ್ಲಿ ಎಲ್ಲರೂ ಭಾಗವಹಿಸಿ ಒಗ್ಗಟ್ಟಿನ ಮನೋಭಾವವನ್ನು ಆಚರಿಸಿ! ಸರ್ದಾರ್ ಪಟೇಲ್ ಅವರ ಏಕತಾ ಭಾರತದ ದೃಷ್ಟಿಕೋನವನ್ನು ನಾವೆಲ್ಲರೂ ಗೌರವಿಸೋಣ.”

 

 

****


(रिलीज़ आईडी: 2182759) आगंतुक पटल : 84
इस विज्ञप्ति को इन भाषाओं में पढ़ें: Odia , English , Urdu , हिन्दी , Marathi , Assamese , Manipuri , Bengali , Bengali-TR , Punjabi , Gujarati , Tamil , Telugu , Malayalam