ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

Posted On: 03 NOV 2025 10:49AM by PIB Bengaluru

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಚೇರಿ ಈ ಕುರಿತು ಎಕ್ಸ್ ನಲ್ಲಿ ಪೊಸ್ಟ್‌ ಮಾಡಿದೆ:

"ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ತೀವ್ರ ದುಃಖ ತಂದಿದೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi."

“తెలంగాణలోని రంగారెడ్డి జిల్లాలో జరిగిన దుర్ఘటనలో సంభవించిన ప్రాణనష్టం నన్ను చాలా బాధించింది. ఈ క్లిష్ట సమయంలో బాధితులు, వారి కుటుంబ సభ్యులకు ప్రగాఢ సానుభూతి తెలుపుతున్నాను. గాయపడిన వారు త్వరగా కోలుకోవాలని ప్రార్థిస్తున్నాను. మరణించిన వారి కుటుంబానికి పీఎంఎన్ ఆర్ ఎఫ్ నుండి రూ.2 లక్షలు, గాయపడిన వారికి రూ.50,000 చొప్పున నష్ట పరిహారాన్ని అందిస్తాం: ప్రధానమంత్రి @narendramodi"

 

*****


(Release ID: 2185848) Visitor Counter : 5