ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪುರಬ್ ಅಂಗವಾಗಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 05 NOV 2025 10:26AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪುರಬ್ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಶ್ರೀ ಗುರುನಾನಕ್ ದೇವ್ ಅವರ ಜೀವನ ಮತ್ತು ಸಂದೇಶವು ಕಾಲಾತೀತ ಜ್ಞಾನದೊಂದಿಗೆ ಮಾನವೀಯತೆಗೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. "ಅವರ ಸಹಾನುಭೂತಿ, ಸಮಾನತೆ, ನಮ್ರತೆ ಮತ್ತು ಸೇವೆಯ ಬೋಧನೆಗಳು ಬಹಳ ಸ್ಫೂರ್ತಿದಾಯಕವಾಗಿವೆ," ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:

"ಶ್ರೀ ಗುರುನಾನಕ್ ದೇವ್ ಅವರ ಜೀವನ ಮತ್ತು ಸಂದೇಶವು ಕಾಲಾತೀತ  ಜ್ಞಾನದೊಂದಿಗೆ ಮಾನವೀಯತೆಗೆ ಮಾರ್ಗದರ್ಶನ ನೀಡುತ್ತಲೇ ಇದೆ. ಸಹಾನುಭೂತಿ, ಸಮಾನತೆ, ನಮ್ರತೆ ಮತ್ತು ಸೇವೆಯ ಅವರ ಬೋಧನೆಗಳು ಬಹಳ ಸ್ಫೂರ್ತಿದಾಯಕವಾಗಿವೆ. ಅವರಿಗೆ ಪ್ರಕಾಶ್ ಪುರಬ್ ಶುಭಾಶಯಗಳು. ಅವರ ದೈವಿಕ ಬೆಳಕು ನಮ್ಮ ಭೂಮಿಯನ್ನು ಶಾಶ್ವತವಾಗಿ ಬೆಳಗಿಸಲಿ."

"ਸ੍ਰੀ ਗੁਰੂ ਨਾਨਕ ਦੇਵ ਜੀ ਦਾ ਜੀਵਨ ਅਤੇ ਸੰਦੇਸ਼ ਮਨੁੱਖਤਾ ਨੂੰ ਸਦੀਵੀ ਗਿਆਨ ਨਾਲ ਮਾਰਗਦਰਸ਼ਨ ਕਰਦਾ ਰਹਿੰਦਾ ਹੈ। ਦਇਆ, ਸਮਾਨਤਾ, ਨਿਮਰਤਾ ਅਤੇ ਸੇਵਾ ਦੀਆਂ ਉਨ੍ਹਾਂ ਦੀਆਂ ਸਿੱਖਿਆਵਾਂ ਬਹੁਤ ਪ੍ਰੇਰਨਾਦਾਇਕ ਹਨ। ਉਨ੍ਹਾਂ ਦੇ ਪ੍ਰਕਾਸ਼ ਪੁਰਬ ਦੀਆਂ ਸ਼ੁਭਕਾਮਨਾਵਾਂ। ਉਨ੍ਹਾਂ ਦਾ ਬ੍ਰਹਮ ਪ੍ਰਕਾਸ਼ ਸਾਡੇ ਗ੍ਰਹਿ ਨੂੰ ਹਮੇਸ਼ਾ ਲਈ ਰੌਸ਼ਨ ਕਰਦਾ ਰਹੇ।"

****


(ಪ್ರಕಟಣೆ ಐ.ಡಿ.: 2186610) ವಿಸಿಟರ್ ಕೌಂಟರ್ : 42