ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಂಡೀಪುರ ಮತ್ತು ಮುದುಮಲೈ ಹುಲಿ ಸಂರಕ್ಷಿತ ಪ್ರದೇಶಗಳಿಗೆ ಪ್ರಧಾನಮಂತ್ರಿ ಭೇಟಿ

Posted On: 09 APR 2023 2:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕ ಮತ್ತು ತಮಿಳುನಾಡಿನಲ್ಲಿರುವ ಬಂಡೀಪುರ ಮತ್ತು ಮುದುಮಲೈ ಹುಲಿ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡಿದರು. ಅವರು ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ತೆಪ್ಪಕಾಡು ಆನೆ ಶಿಬಿರಕ್ಕೂ ಭೇಟಿ ನೀಡಿ, ಅಲ್ಲಿ ಮಾವುತರು ಮತ್ತು ಕಾವಾಡಿಗಳೊಂದಿಗೆ ಸಂವಾದ ನಡೆಸಿದರು ಹಾಗೂ ಆನೆಗಳಿಗೆ ಆಹಾರ ನೀಡಿದರು. ಆಸ್ಕರ್ ಪ್ರಶಸ್ತಿ ವಿಜೇತ 'ದಿ ಎಲಿಫೆಂಟ್ ವಿಸ್ಪರರ್ಸ್' ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡಿರುವ ಆನೆ ಪಾಲಕರೊಂದಿಗೂ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು.

ಪ್ರಧಾನಮಂತ್ರಿಯವರು ಸರಣಿ ಟ್ವೀಟ್‌ಗಳಲ್ಲಿ ಹೀಗೆ ಹೇಳಿದ್ದಾರೆ:

"ರಮಣೀಯವಾದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಳಿಗ್ಗೆ ಕಳೆದಿದ್ದೇನೆ ಮತ್ತು ಭಾರತದ ವನ್ಯಜೀವಿ, ನೈಸರ್ಗಿಕ ಸೌಂದರ್ಯ ಮತ್ತು ವೈವಿಧ್ಯತೆಯನ್ನು ನೋಡುವ ಅವಕಾಶ ದೊರೆಯಿತು."

"ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಇನ್ನಷ್ಟು ಝಲಕ್‌ಗಳು."

"ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭವ್ಯವಾದ ಆನೆಗಳೊಂದಿಗೆ."

"ಅದ್ಭುತವಾದ ಬೊಮ್ಮನ್ ಮತ್ತು ಬೆಳ್ಳಿ ಅವರ ಜೊತೆಗೆ ಬೊಮ್ಮಿ ಮತ್ತು ರಘು ಅವರನ್ನು ಭೇಟಿಯಾಗಿದ್ದು ಸಂತೋಷ ತಂದಿದೆ."

ಪ್ರಧಾನಮಂತ್ರಿ ಕಾರ್ಯಾಲಯ (PMO) ಟ್ವೀಟ್ ಮಾಡಿದೆ:

"ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಂಡೀಪುರ ಮತ್ತು ಮುದುಮಲೈ ಹುಲಿ ಸಂರಕ್ಷಿತ ಪ್ರದೇಶಗಳ ಕಡೆಗೆ ಪ್ರಯಾಣದಲ್ಲಿದ್ದಾರೆ."

 

*****


(Release ID: 2188366) Visitor Counter : 10